ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ‘ಕುಡಿಯುವ ನೀರಿನ ಸಮಸ್ಯೆ ಕುರಿತು ಆಯಾ ವಲಯ ವ್ಯಾಪ್ತಿಯಲ್ಲಿ ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ನೋಂದಣಿಯಾಗಿರುವ ಟ್ಯಾಂಕರ್ಗಳನ್ನು ಈಗಾಗಲೇ ವಲಯವಾರು ನಿಯೋಜನೆ ಮಾಡಲಾಗಿದ್ದು, ಸಮಸ್ಯೆಯಿರುವ ಪ್ರದೇಶಗಳಿಗೆ ನೀರಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.