<p><strong>ಬೆಂಗಳೂರು: ‘</strong>ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಸರ್ಕಾರವು ಈಗಾಗಲೇ ಅನೇಕ ಹೆಜ್ಜೆಗಳನ್ನು ಇಟ್ಟಿದೆ. ರಾಜ್ಯದ ಶೈಕ್ಷಣಿಕ ವಲಯದಲ್ಲಿ ದೊಡ್ಡ ಸುಧಾರಣಾ ಪರ್ವವೇ ಆರಂಭವಾಗಿದೆ’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಡಾ. ದ.ರಾ. ಬೇಂದ್ರೆಯವರ ಜಯಂತ್ಯುತ್ಸವ ಅಂಗವಾಗಿ ವಿ. ಸೋಮಣ್ಣ ಪ್ರತಿಷ್ಠಾನ ವತಿಯಿಂದ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ‘ಉತ್ತಮ ಸಮಾಜದ ಜತೆಗೆ ಉತ್ತಮ ಬದುಕು ಕಟ್ಟಿಕೊಳ್ಳಲು ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ' ಎಂದರು.</p>.<p>‘ಶಿಕ್ಷಣವನ್ನು ಕೇವಲ ಅಕಾಡೆಮಿಕ್ ದೃಷ್ಟಿಯಿಂದ ಕಲಿಯುವುದಲ್ಲ. ಅದು ಎಲ್ಲ ಹಂತಗಳಲ್ಲೂ ದೇಶಕ್ಕೆ ಪೂರಕವಾಗಿರಬೇಕು. ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ಇನ್ನಾವುದೇ ಉದ್ದೇಶವಿದ್ದರೂ ಅಂತಿಮವಾಗಿ ನಮ್ಮ ಕಲಿಕೆಯು ಸಮಾಜಕ್ಕೆ ಅರ್ಪಣೆಯಾಗಬೇಕು. ಈ ನಿಟ್ಟಿನಲ್ಲಿ ಶೈಕ್ಷಣಿಕ ಕ್ಷೇತ್ರವನ್ನು ಮರು ನಿರ್ಮಾಣ ಮಾಡಲಾಗುತ್ತಿದೆ’ ಎಂದರು.</p>.<p>ವಸತಿ ಸಚಿವ ವಿ. ಸೋಮಣ್ಣ, ‘ಯಾವುದೇ ಕಾರ್ಯದಲ್ಲಿ ಸರ್ಕಾರದ ಜೊತೆಗೆ ಖಾಸಗಿಯವರ ಸಹಕಾರವೂ ಇದ್ದರೆ ಅಭಿವೃದ್ಧಿ ಸಾಧ್ಯ’ ಎಂದರು.</p>.<p>ದ.ರಾ.ಬೇಂದ್ರೆ ಅವರ ಬಗ್ಗೆ ವಿಮರ್ಶಕ ನರಹಳ್ಳಿ ಬಾಲಸುಬ್ರಹ್ಮಣ್ಯ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಸೊಗಡು ಶಿವಣ್ಣ, ಪ್ರತಿಷ್ಠಾನದ ಅಧ್ಯಕ್ಷೆ ಶೈಲಜಾ ಸೋಮಣ್ಣ, ಕಾರ್ಯಾಧ್ಯಕ್ಷ ಡಾ.ಅರುಣ್ ಸೋಮಣ್ಣ, ಕೋಶಾಧ್ಯಕ್ಷ ನವೀನ್ ಸೋಮಣ್ಣ, ಕಾಸಿಯಾ ಕಾರ್ಯದರ್ಶಿ ಜಗದೀಶ್ ಪಾಲ್ಗೊಂಡಿದ್ದರು.</p>.<p>2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ, ಬಿಬಿಎಂಪಿ ಪ್ರೌಢಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಸರ್ಕಾರವು ಈಗಾಗಲೇ ಅನೇಕ ಹೆಜ್ಜೆಗಳನ್ನು ಇಟ್ಟಿದೆ. ರಾಜ್ಯದ ಶೈಕ್ಷಣಿಕ ವಲಯದಲ್ಲಿ ದೊಡ್ಡ ಸುಧಾರಣಾ ಪರ್ವವೇ ಆರಂಭವಾಗಿದೆ’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಡಾ. ದ.ರಾ. ಬೇಂದ್ರೆಯವರ ಜಯಂತ್ಯುತ್ಸವ ಅಂಗವಾಗಿ ವಿ. ಸೋಮಣ್ಣ ಪ್ರತಿಷ್ಠಾನ ವತಿಯಿಂದ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ‘ಉತ್ತಮ ಸಮಾಜದ ಜತೆಗೆ ಉತ್ತಮ ಬದುಕು ಕಟ್ಟಿಕೊಳ್ಳಲು ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ' ಎಂದರು.</p>.<p>‘ಶಿಕ್ಷಣವನ್ನು ಕೇವಲ ಅಕಾಡೆಮಿಕ್ ದೃಷ್ಟಿಯಿಂದ ಕಲಿಯುವುದಲ್ಲ. ಅದು ಎಲ್ಲ ಹಂತಗಳಲ್ಲೂ ದೇಶಕ್ಕೆ ಪೂರಕವಾಗಿರಬೇಕು. ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ಇನ್ನಾವುದೇ ಉದ್ದೇಶವಿದ್ದರೂ ಅಂತಿಮವಾಗಿ ನಮ್ಮ ಕಲಿಕೆಯು ಸಮಾಜಕ್ಕೆ ಅರ್ಪಣೆಯಾಗಬೇಕು. ಈ ನಿಟ್ಟಿನಲ್ಲಿ ಶೈಕ್ಷಣಿಕ ಕ್ಷೇತ್ರವನ್ನು ಮರು ನಿರ್ಮಾಣ ಮಾಡಲಾಗುತ್ತಿದೆ’ ಎಂದರು.</p>.<p>ವಸತಿ ಸಚಿವ ವಿ. ಸೋಮಣ್ಣ, ‘ಯಾವುದೇ ಕಾರ್ಯದಲ್ಲಿ ಸರ್ಕಾರದ ಜೊತೆಗೆ ಖಾಸಗಿಯವರ ಸಹಕಾರವೂ ಇದ್ದರೆ ಅಭಿವೃದ್ಧಿ ಸಾಧ್ಯ’ ಎಂದರು.</p>.<p>ದ.ರಾ.ಬೇಂದ್ರೆ ಅವರ ಬಗ್ಗೆ ವಿಮರ್ಶಕ ನರಹಳ್ಳಿ ಬಾಲಸುಬ್ರಹ್ಮಣ್ಯ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಸೊಗಡು ಶಿವಣ್ಣ, ಪ್ರತಿಷ್ಠಾನದ ಅಧ್ಯಕ್ಷೆ ಶೈಲಜಾ ಸೋಮಣ್ಣ, ಕಾರ್ಯಾಧ್ಯಕ್ಷ ಡಾ.ಅರುಣ್ ಸೋಮಣ್ಣ, ಕೋಶಾಧ್ಯಕ್ಷ ನವೀನ್ ಸೋಮಣ್ಣ, ಕಾಸಿಯಾ ಕಾರ್ಯದರ್ಶಿ ಜಗದೀಶ್ ಪಾಲ್ಗೊಂಡಿದ್ದರು.</p>.<p>2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ, ಬಿಬಿಎಂಪಿ ಪ್ರೌಢಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>