‘ಜಲಮಂಡಳಿ, ಬೆಸ್ಕಾಂ ಜೊತೆಗೆ ಸಮನ್ವಯ ಸಾಧಿಸಿ ತಂಡ ರಚಿಸಲಾಗಿದೆ. ನೀರು ನಿಲ್ಲುವ, ಮನೆಗಳಿಗೆ ನೀರು ನುಗ್ಗುವ ಪ್ರದೇಶಗಳಲ್ಲಿ ಶಾಶ್ವತವಾಗಿ ಪರಿಹಾರ ಕೈಗೊಳ್ಳಲು ಸಾಧ್ಯವಾಗದ ಕಡೆಗಳಲ್ಲಿ ಮೋಟರ್ ಪಂಪ್ ಅಳವಡಿಸಿ, ಪೈಪ್ ಮೂಲಕ ನೀರು ಹೊರ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಜನರು ಯಾವುದೇ ರೀತಿಯಲ್ಲಿ ಭಯಪಡುವ ಅಗತ್ಯವಿಲ್ಲ’ ಎಂದು ವಿವರಿಸಿದರು.