<p><strong>ರಾಜರಾಜೇಶ್ವರಿ ನಗರ</strong>: ‘ಭಾರತೀಯ ಸಂಸ್ಕಾರ, ಸಂಸ್ಕೃತಿ, ಪರಂಪರೆ, ಇತಿಹಾಸ ವಿನಾಶದ ಅಂಚಿನಲ್ಲಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಯುವ ಜನಾಂಗ ಎಚ್ಚೆತ್ತುಕೊಂಡು ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಉಳಿಸುವ ಕೆಲಸ ಮಾಡಬೇಕು’ ಎಂದು ಗಾಯಕಿ ಅರ್ಚನಾ ಉಡುಪ ಅವರು ಕರೆ ನೀಡಿದರು.</p>.<p>ಮಲ್ಲತ್ತಹಳ್ಳಿಯ ಶ್ರೀ ದುರ್ಗಾಪರಮೇಶ್ವರಿ ಎಜುಕೇಶನ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಜೆ.ಎಸ್. ಉತ್ಸವ–2025 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ವಿದೇಶಿ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ತಿರಸ್ಕರಿಸಿ, ಸಾವಿರಾರು ವರ್ಷಗಳ ಇತಿಹಾಸವಿರುವ ನಮ್ಮ ಭಾಷೆ, ಕನ್ನಡ ಸಂಸ್ಕೃತಿ ಪರಂಪರೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ನಾನು ಕನ್ನಡಿಗ ಎಂದು ಹೆಮ್ಮೆಯಿಂದ ಹೇಳಿ’ ಎಂದರು.</p>.<p>ಜೆ. ಎಸ್. ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಜಯರಾಮ ಶೆಟ್ಟಿ ಮಾತನಾಡಿ, ‘ಯುವ ಜನಾಂಗದವರು ಹೊಸ ವಿಷಯ, ಆವಿಷ್ಕಾರ, ಸತತ ಅಭ್ಯಾಸದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ’ ಎಂದರು.</p>.<p>ನಿರ್ಮಾಣ್ ಸಮೂಹ ಶಿಕ್ಷಣ ಸಮಿತಿಯ ಅಧ್ಯಕ್ಷ ಓ.ಮೋಹನ್ ಕುಮಾರ್, ಪ್ರೊ, ಮುರಳಿದರ್ ಹೆಗಡೆ, ಸಂಸ್ಥೆಯ ಉಪಾಧ್ಯಕ್ಷೆ ಸುಮಾ ಜೆ. ಶೆಟ್ಟಿ, ಕಾರ್ಯದರ್ಶಿ ನಿತೀಶ್, ಪ್ರಾಂಶುಪಾಲೆ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.</p>
<p><strong>ರಾಜರಾಜೇಶ್ವರಿ ನಗರ</strong>: ‘ಭಾರತೀಯ ಸಂಸ್ಕಾರ, ಸಂಸ್ಕೃತಿ, ಪರಂಪರೆ, ಇತಿಹಾಸ ವಿನಾಶದ ಅಂಚಿನಲ್ಲಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಯುವ ಜನಾಂಗ ಎಚ್ಚೆತ್ತುಕೊಂಡು ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಉಳಿಸುವ ಕೆಲಸ ಮಾಡಬೇಕು’ ಎಂದು ಗಾಯಕಿ ಅರ್ಚನಾ ಉಡುಪ ಅವರು ಕರೆ ನೀಡಿದರು.</p>.<p>ಮಲ್ಲತ್ತಹಳ್ಳಿಯ ಶ್ರೀ ದುರ್ಗಾಪರಮೇಶ್ವರಿ ಎಜುಕೇಶನ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಜೆ.ಎಸ್. ಉತ್ಸವ–2025 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ವಿದೇಶಿ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ತಿರಸ್ಕರಿಸಿ, ಸಾವಿರಾರು ವರ್ಷಗಳ ಇತಿಹಾಸವಿರುವ ನಮ್ಮ ಭಾಷೆ, ಕನ್ನಡ ಸಂಸ್ಕೃತಿ ಪರಂಪರೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ನಾನು ಕನ್ನಡಿಗ ಎಂದು ಹೆಮ್ಮೆಯಿಂದ ಹೇಳಿ’ ಎಂದರು.</p>.<p>ಜೆ. ಎಸ್. ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಜಯರಾಮ ಶೆಟ್ಟಿ ಮಾತನಾಡಿ, ‘ಯುವ ಜನಾಂಗದವರು ಹೊಸ ವಿಷಯ, ಆವಿಷ್ಕಾರ, ಸತತ ಅಭ್ಯಾಸದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ’ ಎಂದರು.</p>.<p>ನಿರ್ಮಾಣ್ ಸಮೂಹ ಶಿಕ್ಷಣ ಸಮಿತಿಯ ಅಧ್ಯಕ್ಷ ಓ.ಮೋಹನ್ ಕುಮಾರ್, ಪ್ರೊ, ಮುರಳಿದರ್ ಹೆಗಡೆ, ಸಂಸ್ಥೆಯ ಉಪಾಧ್ಯಕ್ಷೆ ಸುಮಾ ಜೆ. ಶೆಟ್ಟಿ, ಕಾರ್ಯದರ್ಶಿ ನಿತೀಶ್, ಪ್ರಾಂಶುಪಾಲೆ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.</p>