<p><strong>ರಾಜರಾಜೇಶ್ವರಿ ನಗರ</strong>: ‘ಭಾರತೀಯ ಸಂಸ್ಕಾರ, ಸಂಸ್ಕೃತಿ, ಪರಂಪರೆ, ಇತಿಹಾಸ ವಿನಾಶದ ಅಂಚಿನಲ್ಲಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಯುವ ಜನಾಂಗ ಎಚ್ಚೆತ್ತುಕೊಂಡು ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಉಳಿಸುವ ಕೆಲಸ ಮಾಡಬೇಕು’ ಎಂದು ಗಾಯಕಿ ಅರ್ಚನಾ ಉಡುಪ ಅವರು ಕರೆ ನೀಡಿದರು.</p>.<p>ಮಲ್ಲತ್ತಹಳ್ಳಿಯ ಶ್ರೀ ದುರ್ಗಾಪರಮೇಶ್ವರಿ ಎಜುಕೇಶನ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಜೆ.ಎಸ್. ಉತ್ಸವ–2025 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ವಿದೇಶಿ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ತಿರಸ್ಕರಿಸಿ, ಸಾವಿರಾರು ವರ್ಷಗಳ ಇತಿಹಾಸವಿರುವ ನಮ್ಮ ಭಾಷೆ, ಕನ್ನಡ ಸಂಸ್ಕೃತಿ ಪರಂಪರೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ನಾನು ಕನ್ನಡಿಗ ಎಂದು ಹೆಮ್ಮೆಯಿಂದ ಹೇಳಿ’ ಎಂದರು.</p>.<p>ಜೆ. ಎಸ್. ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಜಯರಾಮ ಶೆಟ್ಟಿ ಮಾತನಾಡಿ, ‘ಯುವ ಜನಾಂಗದವರು ಹೊಸ ವಿಷಯ, ಆವಿಷ್ಕಾರ, ಸತತ ಅಭ್ಯಾಸದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ’ ಎಂದರು.</p>.<p>ನಿರ್ಮಾಣ್ ಸಮೂಹ ಶಿಕ್ಷಣ ಸಮಿತಿಯ ಅಧ್ಯಕ್ಷ ಓ.ಮೋಹನ್ ಕುಮಾರ್, ಪ್ರೊ, ಮುರಳಿದರ್ ಹೆಗಡೆ, ಸಂಸ್ಥೆಯ ಉಪಾಧ್ಯಕ್ಷೆ ಸುಮಾ ಜೆ. ಶೆಟ್ಟಿ, ಕಾರ್ಯದರ್ಶಿ ನಿತೀಶ್, ಪ್ರಾಂಶುಪಾಲೆ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ</strong>: ‘ಭಾರತೀಯ ಸಂಸ್ಕಾರ, ಸಂಸ್ಕೃತಿ, ಪರಂಪರೆ, ಇತಿಹಾಸ ವಿನಾಶದ ಅಂಚಿನಲ್ಲಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಯುವ ಜನಾಂಗ ಎಚ್ಚೆತ್ತುಕೊಂಡು ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಉಳಿಸುವ ಕೆಲಸ ಮಾಡಬೇಕು’ ಎಂದು ಗಾಯಕಿ ಅರ್ಚನಾ ಉಡುಪ ಅವರು ಕರೆ ನೀಡಿದರು.</p>.<p>ಮಲ್ಲತ್ತಹಳ್ಳಿಯ ಶ್ರೀ ದುರ್ಗಾಪರಮೇಶ್ವರಿ ಎಜುಕೇಶನ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಜೆ.ಎಸ್. ಉತ್ಸವ–2025 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ವಿದೇಶಿ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ತಿರಸ್ಕರಿಸಿ, ಸಾವಿರಾರು ವರ್ಷಗಳ ಇತಿಹಾಸವಿರುವ ನಮ್ಮ ಭಾಷೆ, ಕನ್ನಡ ಸಂಸ್ಕೃತಿ ಪರಂಪರೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ನಾನು ಕನ್ನಡಿಗ ಎಂದು ಹೆಮ್ಮೆಯಿಂದ ಹೇಳಿ’ ಎಂದರು.</p>.<p>ಜೆ. ಎಸ್. ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಜಯರಾಮ ಶೆಟ್ಟಿ ಮಾತನಾಡಿ, ‘ಯುವ ಜನಾಂಗದವರು ಹೊಸ ವಿಷಯ, ಆವಿಷ್ಕಾರ, ಸತತ ಅಭ್ಯಾಸದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ’ ಎಂದರು.</p>.<p>ನಿರ್ಮಾಣ್ ಸಮೂಹ ಶಿಕ್ಷಣ ಸಮಿತಿಯ ಅಧ್ಯಕ್ಷ ಓ.ಮೋಹನ್ ಕುಮಾರ್, ಪ್ರೊ, ಮುರಳಿದರ್ ಹೆಗಡೆ, ಸಂಸ್ಥೆಯ ಉಪಾಧ್ಯಕ್ಷೆ ಸುಮಾ ಜೆ. ಶೆಟ್ಟಿ, ಕಾರ್ಯದರ್ಶಿ ನಿತೀಶ್, ಪ್ರಾಂಶುಪಾಲೆ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>