<p><strong>ಯಲಹಂಕ</strong>: ಬ್ರಿಟಿಷ್ ಕೌನ್ಸಿಲ್ ಮತ್ತು ನ್ಯಾಷನಲ್ ಇಂಡಿಯನ್ ಸ್ಟೂಡೆಂಟ್ಸ್ ಹಾಗೂ ಅಲುಮ್ನಿ ಯೂನಿಯನ್ ಯಕೆ ಸಹಯೋಗದಲ್ಲಿ ರಾಜಾನುಕುಂಟೆ ಸಮೀಪದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಸಾಧಕರ ಸಂವಾದ-2024 ಬೆಂಗಳೂರು ಆವೃತ್ತಿ‘ ಕಾರ್ಯಕ್ರಮವನ್ನು ಬಹುಭಾಷಾ ನಟಿ ಅದಿತಿ ರಾವ್ ಹೈದರಿ ಉದ್ಘಾಟಿಸಿದರು.</p>.<p>ನಂತರ ಮಾತನಾಡಿದ ಅವರು, ‘ನಾವು ಸದಾ ಸಕಾರಾತ್ಮಕವಾಗಿ ಯೋಚಿಸಬೇಕು. ಮನಸ್ಸು ಯಾವಾಗಲೂ ಹೊಸತನದ ಬಗ್ಗೆ ಆಲೋಚಿಸಬೇಕು. ಪ್ರತಿ ನಿಮಿಷ ಜೀವನದಲ್ಲಿ ಖುಷಿಯನ್ನು ಅನುಭವಿಸಬೇಕು. ಮನಸಿನ ಮಾತಿಗೆ ಓಗೊಟ್ಟು, ನಿಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವ ಪ್ರಯತ್ನವನ್ನು ಎಂದಿಗೂ ನಿಲ್ಲಿಸಬೇಡಿ’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. </p>.<p>ಕುಲಪತಿ ಡಾ.ಅನುಭಾ ಸಿಂಗ್ ಮಾತನಾಡಿ, ‘ಬೇರೆ ಬೇರೆ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ನಮ್ಮ ವಿ.ವಿಗೆ ಆಗಮಿಸಿ, ಉನ್ನತ ಶಿಕ್ಷಣದಲ್ಲಿ ಲಭ್ಯವಿರುವ ಅವಕಾಶಗಳ ಕುರಿತು ಬೆಳಕು ಚೆಲ್ಲಿದ್ದಾರೆ. ಇದರಿಂದ ನಮ್ಮ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ನಿಸಾರ್ ಅಹಮದ್, ಉಪಾಧ್ಯಕ್ಷ ಸಲ್ಮಾನ್ ಅಹಮದ್, ಸಹ ಕುಲಪತಿ ಡಾ.ಎಂ.ಧನಂಜಯ ಮತ್ತಿತರರು ಉಪಸ್ಥಿತರಿದ್ದರು.</p>.<p>ಕಿಂಗ್ಸ್ ಕಾಲೇಜ್ ಆಫ್ ಲಂಡನ್, ಇಂಪೀರಿಯಲ್ ಕಾಲೇಜ್ ಆಫ್ ಲಂಡನ್ ಹಾಗೂ ಡರ್ಹಾಮ್ ವಿಶ್ವವಿದ್ಯಾಲಯ ಸೇರಿದಂತೆ 30ಕ್ಕೂ ಹೆಚ್ಚು ಜಾಗತಿಕ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಜೊತೆಗೆ, ಬೆಂಗಳೂರಿನ ಪ್ರಮುಖ ಕಾಲೇಜುಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ಬ್ರಿಟಿಷ್ ಕೌನ್ಸಿಲ್ ಮತ್ತು ನ್ಯಾಷನಲ್ ಇಂಡಿಯನ್ ಸ್ಟೂಡೆಂಟ್ಸ್ ಹಾಗೂ ಅಲುಮ್ನಿ ಯೂನಿಯನ್ ಯಕೆ ಸಹಯೋಗದಲ್ಲಿ ರಾಜಾನುಕುಂಟೆ ಸಮೀಪದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಸಾಧಕರ ಸಂವಾದ-2024 ಬೆಂಗಳೂರು ಆವೃತ್ತಿ‘ ಕಾರ್ಯಕ್ರಮವನ್ನು ಬಹುಭಾಷಾ ನಟಿ ಅದಿತಿ ರಾವ್ ಹೈದರಿ ಉದ್ಘಾಟಿಸಿದರು.</p>.<p>ನಂತರ ಮಾತನಾಡಿದ ಅವರು, ‘ನಾವು ಸದಾ ಸಕಾರಾತ್ಮಕವಾಗಿ ಯೋಚಿಸಬೇಕು. ಮನಸ್ಸು ಯಾವಾಗಲೂ ಹೊಸತನದ ಬಗ್ಗೆ ಆಲೋಚಿಸಬೇಕು. ಪ್ರತಿ ನಿಮಿಷ ಜೀವನದಲ್ಲಿ ಖುಷಿಯನ್ನು ಅನುಭವಿಸಬೇಕು. ಮನಸಿನ ಮಾತಿಗೆ ಓಗೊಟ್ಟು, ನಿಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವ ಪ್ರಯತ್ನವನ್ನು ಎಂದಿಗೂ ನಿಲ್ಲಿಸಬೇಡಿ’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. </p>.<p>ಕುಲಪತಿ ಡಾ.ಅನುಭಾ ಸಿಂಗ್ ಮಾತನಾಡಿ, ‘ಬೇರೆ ಬೇರೆ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ನಮ್ಮ ವಿ.ವಿಗೆ ಆಗಮಿಸಿ, ಉನ್ನತ ಶಿಕ್ಷಣದಲ್ಲಿ ಲಭ್ಯವಿರುವ ಅವಕಾಶಗಳ ಕುರಿತು ಬೆಳಕು ಚೆಲ್ಲಿದ್ದಾರೆ. ಇದರಿಂದ ನಮ್ಮ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ನಿಸಾರ್ ಅಹಮದ್, ಉಪಾಧ್ಯಕ್ಷ ಸಲ್ಮಾನ್ ಅಹಮದ್, ಸಹ ಕುಲಪತಿ ಡಾ.ಎಂ.ಧನಂಜಯ ಮತ್ತಿತರರು ಉಪಸ್ಥಿತರಿದ್ದರು.</p>.<p>ಕಿಂಗ್ಸ್ ಕಾಲೇಜ್ ಆಫ್ ಲಂಡನ್, ಇಂಪೀರಿಯಲ್ ಕಾಲೇಜ್ ಆಫ್ ಲಂಡನ್ ಹಾಗೂ ಡರ್ಹಾಮ್ ವಿಶ್ವವಿದ್ಯಾಲಯ ಸೇರಿದಂತೆ 30ಕ್ಕೂ ಹೆಚ್ಚು ಜಾಗತಿಕ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಜೊತೆಗೆ, ಬೆಂಗಳೂರಿನ ಪ್ರಮುಖ ಕಾಲೇಜುಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>