ಬೆಂಗಳೂರು: ಲೇವಾದೇವಿಗಾರರು, ಖಾಸಗಿ ಹಣಕಾಸು ಸಂಸ್ಥೆಗಳು, ಗಿರವಿ ಅಂಗಡಿಗಳಲ್ಲಿ ರೈತರು, ಭೂರಹಿತ ಕೃಷಿ ಕಾರ್ಮಿಕರು ಹಾಗೂ ದುರ್ಬಲ ವರ್ಗದವರ ಸಾಲವನ್ನು ಏಕಗಂಟಿನಲ್ಲಿ ‘ಚುಕ್ತಾ’ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ತಂದಿರುವ ‘ಋಣ ಪರಿಹಾರ ಸುಗ್ರೀವಾಜ್ಞೆ’ಗೆ ಕೆಲವು ತಿದ್ದುಪಡಿಗಳನ್ನು ಮಾಡುವಂತೆ ಸೂಚಿಸಿರುವ ಕೇಂದ್ರ ಸರ್ಕಾರ ವಾಪಾಸು ಕಳುಹಿಸಿದೆ.