<p><strong>ಬೆಂಗಳೂರು: </strong>‘ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕುರ್ಚಿ ಖಾಲಿ ಇಲ್ಲ. ಈಗಲೂ ನಾನೇ ರೈತ ಸಂಘದ ಅಧ್ಯಕ್ಷ’ ಎಂದು ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.</p>.<p>‘ಕೋಡಿಹಳ್ಳಿ ಅವರು ಹಸಿರು ಟವೆಲ್ ಧರಿಸಬಾರದು ಎಂದು ಹೇಳಿರುವ ಎಚ್.ಆರ್.ಬಸವರಾಜಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರೈತ ಸಂಘದ ರಶೀದಿಗಳ ದುರ್ಬಳಕೆ ಮತ್ತು ಕಬ್ಬಿನ ಹಣದಲ್ಲಿ ನಡೆದ ಭ್ರಷ್ಟಾಚಾರ ಆರೋಪದ ಮೇಲೆ 2016ರಲ್ಲಿ ರೈತ ಸಂಘದಿಂದ ಅವರನ್ನು ತೆಗೆದು<br />ಹಾಕಲಾಗಿದೆ. ಯಾರೂ ಆರೋಪಿಗಳು ಬಂದು ನನ್ನ ಬಗ್ಗೆ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದೆ. ಆದರೆ ಯಾವ ಸರ್ಕಾರಗಳು ಪಾಲನೆ ಮಾಡುತ್ತಿಲ್ಲ. ರಾಜ್ಯದ ಪ್ರಮುಖ ಬೆಳೆಗಳು ಎಂಎಸ್ಪಿಗಿಂತ ಮಾರುಕಟ್ಟೆಯಲ್ಲಿ ಕನಿಷ್ಠ ಬೆಲೆಗೆ ಮಾರಾಟ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>‘ರಾಜ್ಯ ಸರ್ಕಾರ ರೈತರಿಗೆ ಗೊಬ್ಬರದ ಕೊರತೆಯಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲ ದಿದ್ದರೆ ರೈತರು ಬೀದಿಗೆ ಬರ<br />ಬೇಕಾಗುತ್ತದೆ. ಮತ್ತೊಮ್ಮೆ ಹಾವೇರಿ ಗೋಲಿಬಾರ್ನಂತಹ ಕರಾಳ ಘಟನೆ ಮರುಕಳಿಸಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕುರ್ಚಿ ಖಾಲಿ ಇಲ್ಲ. ಈಗಲೂ ನಾನೇ ರೈತ ಸಂಘದ ಅಧ್ಯಕ್ಷ’ ಎಂದು ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.</p>.<p>‘ಕೋಡಿಹಳ್ಳಿ ಅವರು ಹಸಿರು ಟವೆಲ್ ಧರಿಸಬಾರದು ಎಂದು ಹೇಳಿರುವ ಎಚ್.ಆರ್.ಬಸವರಾಜಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರೈತ ಸಂಘದ ರಶೀದಿಗಳ ದುರ್ಬಳಕೆ ಮತ್ತು ಕಬ್ಬಿನ ಹಣದಲ್ಲಿ ನಡೆದ ಭ್ರಷ್ಟಾಚಾರ ಆರೋಪದ ಮೇಲೆ 2016ರಲ್ಲಿ ರೈತ ಸಂಘದಿಂದ ಅವರನ್ನು ತೆಗೆದು<br />ಹಾಕಲಾಗಿದೆ. ಯಾರೂ ಆರೋಪಿಗಳು ಬಂದು ನನ್ನ ಬಗ್ಗೆ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದೆ. ಆದರೆ ಯಾವ ಸರ್ಕಾರಗಳು ಪಾಲನೆ ಮಾಡುತ್ತಿಲ್ಲ. ರಾಜ್ಯದ ಪ್ರಮುಖ ಬೆಳೆಗಳು ಎಂಎಸ್ಪಿಗಿಂತ ಮಾರುಕಟ್ಟೆಯಲ್ಲಿ ಕನಿಷ್ಠ ಬೆಲೆಗೆ ಮಾರಾಟ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>‘ರಾಜ್ಯ ಸರ್ಕಾರ ರೈತರಿಗೆ ಗೊಬ್ಬರದ ಕೊರತೆಯಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲ ದಿದ್ದರೆ ರೈತರು ಬೀದಿಗೆ ಬರ<br />ಬೇಕಾಗುತ್ತದೆ. ಮತ್ತೊಮ್ಮೆ ಹಾವೇರಿ ಗೋಲಿಬಾರ್ನಂತಹ ಕರಾಳ ಘಟನೆ ಮರುಕಳಿಸಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>