ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುರುಬ ಸಮುದಾಯದ ಮುಖಂಡ ಕೆ.ಮುನಿಸ್ವಾಮಿ, ‘ಮಾ.27ರಂದು ಸಂಘದ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಮಂಜುನಾಥ್ ಅವರು ಸಮುದಾಯದ ಒಂದು ಬಣದ ಆಮಿಷಗಳಿಗೆ ಒಳಗಾಗಿ ಅಕ್ರಮಕ್ಕೆ ಅವಕಾಶ ನೀಡಿದ್ದು, ಇದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದು ಆರೋಪಿಸಿದರು.