<p><strong>ಬೆಂಗಳೂರು:</strong> ‘ಆಮ್ ಆದ್ಮಿ ಪಕ್ಷದ ವತಿಯಿಂದ ‘ಶಿಕ್ಷಣ ನಮ್ಮ ಹಕ್ಕು, ಶಿಕ್ಷಣ ನಿಮ್ಮ ಜವಾಬ್ದಾರಿ’ ಎಂಬ ಶೈಕ್ಷಣಿಕ ಸಮ್ಮೇಳನಗಳನ್ನು ಇದೇ 30ರಂದು ಸಂಜೆ 6 ಗಂಟೆಗೆ ಲ್ಯಾವೆಲ್ಲೆ ರಸ್ತೆಯ ರೋಟರಿ ಕ್ಲಬ್ನಲ್ಲಿ ಆಯೋಜಿಸಲಾಗಿದೆ’ ಎಂದುಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ತಿಳಿಸಿದರು.</p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ಪ್ರಸ್ತುತ ಶೈಕ್ಷಣಿಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು ಹಾಗೂ ಅಗತ್ಯ ಬದಲಾವಣೆ ತರುವ ಸಂಬಂಧ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>‘ದೆಹಲಿ ಶಾಸಕಿ ಅತಿಶಿ ಮರ್ಲೆನಾ ಹಾಗೂಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.ನ್ಯಾಷನಲ್ ಲಾ ಸ್ಕೂಲ್ನ ಪ್ರಾಧ್ಯಾಪಕ ಬಾಬು ಮ್ಯಾಥ್ಯು, ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ಕರ್ನಾಟಕದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟಿಗೆ ಕಾರಣ ಮತ್ತು ಪರಿಹಾರ’ ಚರ್ಚೆಯಲ್ಲಿಕೆಎಎಂಎಸ್ನ ಮುಖ್ಯಸ್ಥ ಶಶಿಕುಮಾರ್, ಗುರು ಕಾಶಿನಾಥನ್, ಅಕ್ಷರ ಫೌಂಡೇಷನ್ನ ಪುಷ್ಪಾ ತಂತ್ರಿ, ಶಿಕ್ಷಕಿ ಉಷಾ ಮೋಹನ್, ದಕ್ಷ್ನ ಸೂರ್ಯ ಪ್ರಕಾಶ್ ಭಾಗವಹಿಸಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಆಮ್ ಆದ್ಮಿ ಪಕ್ಷದ ವತಿಯಿಂದ ‘ಶಿಕ್ಷಣ ನಮ್ಮ ಹಕ್ಕು, ಶಿಕ್ಷಣ ನಿಮ್ಮ ಜವಾಬ್ದಾರಿ’ ಎಂಬ ಶೈಕ್ಷಣಿಕ ಸಮ್ಮೇಳನಗಳನ್ನು ಇದೇ 30ರಂದು ಸಂಜೆ 6 ಗಂಟೆಗೆ ಲ್ಯಾವೆಲ್ಲೆ ರಸ್ತೆಯ ರೋಟರಿ ಕ್ಲಬ್ನಲ್ಲಿ ಆಯೋಜಿಸಲಾಗಿದೆ’ ಎಂದುಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ತಿಳಿಸಿದರು.</p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ಪ್ರಸ್ತುತ ಶೈಕ್ಷಣಿಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು ಹಾಗೂ ಅಗತ್ಯ ಬದಲಾವಣೆ ತರುವ ಸಂಬಂಧ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>‘ದೆಹಲಿ ಶಾಸಕಿ ಅತಿಶಿ ಮರ್ಲೆನಾ ಹಾಗೂಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.ನ್ಯಾಷನಲ್ ಲಾ ಸ್ಕೂಲ್ನ ಪ್ರಾಧ್ಯಾಪಕ ಬಾಬು ಮ್ಯಾಥ್ಯು, ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ಕರ್ನಾಟಕದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟಿಗೆ ಕಾರಣ ಮತ್ತು ಪರಿಹಾರ’ ಚರ್ಚೆಯಲ್ಲಿಕೆಎಎಂಎಸ್ನ ಮುಖ್ಯಸ್ಥ ಶಶಿಕುಮಾರ್, ಗುರು ಕಾಶಿನಾಥನ್, ಅಕ್ಷರ ಫೌಂಡೇಷನ್ನ ಪುಷ್ಪಾ ತಂತ್ರಿ, ಶಿಕ್ಷಕಿ ಉಷಾ ಮೋಹನ್, ದಕ್ಷ್ನ ಸೂರ್ಯ ಪ್ರಕಾಶ್ ಭಾಗವಹಿಸಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>