<p><strong>ಬೆಂಗಳೂರು</strong>: ‘ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ದಿನಸಿ ಕಿಟ್ ವಿತರಣೆಯಲ್ಲಿ ಭಾರಿ ಅಕ್ರಮ ನಡೆದಿದ್ದು, ಈ ಬಗ್ಗೆ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು’ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಆಗ್ರಹಿಸಿದೆ.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಎನ್ಟಿಯುಸಿ ಸಂಘಟನೆಯ ಶ್ಯಾಮಣ್ಣ ರೆಡ್ಡಿ,‘ಮಂಡಳಿಯುಸುಮಾರು ₹2,500 ಕೋಟಿ ಸೆಸ್ ಹಣದಿಂದ ಕೆಲವು ಪರಿಹಾರ ಕಾರ್ಯಗಳನ್ನು ಕೈಗೊಂಡಿತ್ತು. ಕಟ್ಟಡ ಕಾರ್ಮಿಕರಿಗಾಗಿ ಮಂಡಳಿ 21 ಲಕ್ಷ ದಿನಸಿ ಕಿಟ್ಗಳನ್ನು ಹಂಚಿಕೆ ಮಾಡಿರುವುದಾಗಿ ವರದಿಯಲ್ಲಿದೆ. ಆದರೆ, ವಿತರಣೆಯಾಗಿರುವ ದಿನಸಿ ಹಾಗೂ ಸುರಕ್ಷಾ ಕಿಟ್ಗಳ ಗುಣಮಟ್ಟ ತೀರಾ ಕಳಪೆಯಾಗಿದೆ’ ಎಂದು ಆರೋಪಿಸಿದರು.</p>.<p>‘ಮಂಡಳಿಯಲ್ಲಿ ಕೋಟ್ಯಂತರ ಹಣ ಖರ್ಚು ಮಾಡಿ ದುಬಾರಿ ಕಾರುಗಳನ್ನು ಖರೀದಿಸಲಾಗಿದೆ. ಕೋವಿಡ್ ಪರಿಸ್ಥಿತಿಯಲ್ಲಿ ಈ ರೀತಿ ದುಂದುವೆಚ್ಚದ ಅಗತ್ಯ ಏನಿತ್ತು?’ ಎಂದು ಪ್ರಶ್ನಿಸಿದರು.</p>.<p>ಎಐಯುಟಿಯುಸಿ ಸಂಘಟನೆಯ ಕೆ.ವಿ.ಭಟ್,‘ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರ ಖಾತೆಗಳಿಗೆ ಕೋವಿಡ್ ಪರಿಹಾರವಾಗಿ ತಲಾ ₹10 ಸಾವಿರ ಜಮಾ ಆಗಬೇಕು. ಮಂಡಳಿಯಲ್ಲಿ ನಡೆದಿರುವ ಭಾರಿ ಅಕ್ರಮದ ಬಗ್ಗೆ ತನಿಖೆ ನಡೆಯಬೇಕು ಹಾಗೂ ಮಂಡಳಿಯ ಹಣ ದುರುಪಯೋಗ ಆಗದಂತೆ ತಡೆಯಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ದಿನಸಿ ಕಿಟ್ ವಿತರಣೆಯಲ್ಲಿ ಭಾರಿ ಅಕ್ರಮ ನಡೆದಿದ್ದು, ಈ ಬಗ್ಗೆ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು’ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಆಗ್ರಹಿಸಿದೆ.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಎನ್ಟಿಯುಸಿ ಸಂಘಟನೆಯ ಶ್ಯಾಮಣ್ಣ ರೆಡ್ಡಿ,‘ಮಂಡಳಿಯುಸುಮಾರು ₹2,500 ಕೋಟಿ ಸೆಸ್ ಹಣದಿಂದ ಕೆಲವು ಪರಿಹಾರ ಕಾರ್ಯಗಳನ್ನು ಕೈಗೊಂಡಿತ್ತು. ಕಟ್ಟಡ ಕಾರ್ಮಿಕರಿಗಾಗಿ ಮಂಡಳಿ 21 ಲಕ್ಷ ದಿನಸಿ ಕಿಟ್ಗಳನ್ನು ಹಂಚಿಕೆ ಮಾಡಿರುವುದಾಗಿ ವರದಿಯಲ್ಲಿದೆ. ಆದರೆ, ವಿತರಣೆಯಾಗಿರುವ ದಿನಸಿ ಹಾಗೂ ಸುರಕ್ಷಾ ಕಿಟ್ಗಳ ಗುಣಮಟ್ಟ ತೀರಾ ಕಳಪೆಯಾಗಿದೆ’ ಎಂದು ಆರೋಪಿಸಿದರು.</p>.<p>‘ಮಂಡಳಿಯಲ್ಲಿ ಕೋಟ್ಯಂತರ ಹಣ ಖರ್ಚು ಮಾಡಿ ದುಬಾರಿ ಕಾರುಗಳನ್ನು ಖರೀದಿಸಲಾಗಿದೆ. ಕೋವಿಡ್ ಪರಿಸ್ಥಿತಿಯಲ್ಲಿ ಈ ರೀತಿ ದುಂದುವೆಚ್ಚದ ಅಗತ್ಯ ಏನಿತ್ತು?’ ಎಂದು ಪ್ರಶ್ನಿಸಿದರು.</p>.<p>ಎಐಯುಟಿಯುಸಿ ಸಂಘಟನೆಯ ಕೆ.ವಿ.ಭಟ್,‘ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರ ಖಾತೆಗಳಿಗೆ ಕೋವಿಡ್ ಪರಿಹಾರವಾಗಿ ತಲಾ ₹10 ಸಾವಿರ ಜಮಾ ಆಗಬೇಕು. ಮಂಡಳಿಯಲ್ಲಿ ನಡೆದಿರುವ ಭಾರಿ ಅಕ್ರಮದ ಬಗ್ಗೆ ತನಿಖೆ ನಡೆಯಬೇಕು ಹಾಗೂ ಮಂಡಳಿಯ ಹಣ ದುರುಪಯೋಗ ಆಗದಂತೆ ತಡೆಯಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>