ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಎನ್ಟಿಯುಸಿ ಸಂಘಟನೆಯ ಶ್ಯಾಮಣ್ಣ ರೆಡ್ಡಿ,‘ಮಂಡಳಿಯುಸುಮಾರು ₹2,500 ಕೋಟಿ ಸೆಸ್ ಹಣದಿಂದ ಕೆಲವು ಪರಿಹಾರ ಕಾರ್ಯಗಳನ್ನು ಕೈಗೊಂಡಿತ್ತು. ಕಟ್ಟಡ ಕಾರ್ಮಿಕರಿಗಾಗಿ ಮಂಡಳಿ 21 ಲಕ್ಷ ದಿನಸಿ ಕಿಟ್ಗಳನ್ನು ಹಂಚಿಕೆ ಮಾಡಿರುವುದಾಗಿ ವರದಿಯಲ್ಲಿದೆ. ಆದರೆ, ವಿತರಣೆಯಾಗಿರುವ ದಿನಸಿ ಹಾಗೂ ಸುರಕ್ಷಾ ಕಿಟ್ಗಳ ಗುಣಮಟ್ಟ ತೀರಾ ಕಳಪೆಯಾಗಿದೆ’ ಎಂದು ಆರೋಪಿಸಿದರು.