<p><strong>ಬೆಂಗಳೂರು</strong>: ‘ಎಸ್ಸಿ, ಎಸ್ಟಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನಿಗಮ, ಮಂಡಳಿಗಳಿಗೆ ಸರ್ಕಾರದಿಂದ ಶೀಘ್ರವಾಗಿಅನುದಾನ ಬಿಡುಗಡೆ ಮಾಡಬೇಕು’ ಎಂದು ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಾರ್ಮಿಕರ ಕಲ್ಯಾಣ ಸಂಘಗಳ ಒಕ್ಕೂಟ ಆಗ್ರಹಿಸಿದೆ.</p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವಿ.ಎಸ್.ರಾಜಾ,‘ಈ ಸಮುದಾಯಗಳಿಗೆ ಮೀಸಲಾಗಿರುವ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಪರದಾಡಬೇಕಾಗಿದೆ. ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಈವರೆಗೆ ಸೂಕ್ತ ಶಿಕ್ಷೆ ವಿಧಿಸಿಲ್ಲ ಮತ್ತು ಸಮಿತಿಗಳು ಸರಿಯಾಗಿ ರಚನೆಯಾಗಿಲ್ಲ. ಈ ಬಗ್ಗೆ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ಕೊಳಗೇರಿ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಗುತ್ತಿಗೆ ಪೌರ ಕಾರ್ಮಿಕರು ಹಾಗೂ ಮೇಸ್ತ್ರಿಗಳಿಗೆ ಸೇವಾ ಭದ್ರತೆ ಒದಗಿಸಬೇಕು.ಬಡವರಿಗೆ ಹೊರೆಯಾಗುವಂತೆ ಏರಿಸಿರುವ ದಿನಬಳಕೆ ವಸ್ತುಗಳು, ತೈಲ ಮತ್ತು ಆಹಾರ ಪದಾರ್ಥಗಳ ದರಗಳನ್ನು ಕೂಡಲೇ ನಿಯಂತ್ರಣಕ್ಕೆ ತರಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು’ ಎಂದೂ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಎಸ್ಸಿ, ಎಸ್ಟಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನಿಗಮ, ಮಂಡಳಿಗಳಿಗೆ ಸರ್ಕಾರದಿಂದ ಶೀಘ್ರವಾಗಿಅನುದಾನ ಬಿಡುಗಡೆ ಮಾಡಬೇಕು’ ಎಂದು ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಾರ್ಮಿಕರ ಕಲ್ಯಾಣ ಸಂಘಗಳ ಒಕ್ಕೂಟ ಆಗ್ರಹಿಸಿದೆ.</p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವಿ.ಎಸ್.ರಾಜಾ,‘ಈ ಸಮುದಾಯಗಳಿಗೆ ಮೀಸಲಾಗಿರುವ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಪರದಾಡಬೇಕಾಗಿದೆ. ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಈವರೆಗೆ ಸೂಕ್ತ ಶಿಕ್ಷೆ ವಿಧಿಸಿಲ್ಲ ಮತ್ತು ಸಮಿತಿಗಳು ಸರಿಯಾಗಿ ರಚನೆಯಾಗಿಲ್ಲ. ಈ ಬಗ್ಗೆ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ಕೊಳಗೇರಿ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಗುತ್ತಿಗೆ ಪೌರ ಕಾರ್ಮಿಕರು ಹಾಗೂ ಮೇಸ್ತ್ರಿಗಳಿಗೆ ಸೇವಾ ಭದ್ರತೆ ಒದಗಿಸಬೇಕು.ಬಡವರಿಗೆ ಹೊರೆಯಾಗುವಂತೆ ಏರಿಸಿರುವ ದಿನಬಳಕೆ ವಸ್ತುಗಳು, ತೈಲ ಮತ್ತು ಆಹಾರ ಪದಾರ್ಥಗಳ ದರಗಳನ್ನು ಕೂಡಲೇ ನಿಯಂತ್ರಣಕ್ಕೆ ತರಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು’ ಎಂದೂ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>