ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯ ಭ್ರಷ್ಟಾಚಾರದಿಂದ ನಗರದ ಬಹುತೇಕ ರಸ್ತೆಗಳಲ್ಲಿ ಯಮಸ್ವರೂಪಿ ಗುಂಡಿಗಳು ಬಿದ್ದಿವೆ. ಇವುಗಳಿಂದ ಅನೇಕ ವಾಹನ ಸವಾರರು ಗಾಯಗೊಂಡಿದ್ದಾರೆ ಹಾಗೂ ಕೆಲವರು ಜೀವ ಕಳೆದುಕೊಂಡಿದ್ದಾರೆ. ಹಾಗಾಗಿ, ರಸ್ತೆ ಗುಂಡಿಗಳ ನಿರ್ಮೂಲನೆಗಾಗಿ ಪಕ್ಷವು ವಾಟ್ಸ್ಆ್ಯಪ್ ಸಹಾಯವಾಣಿ ಆರಂಭಿಸಿದೆ’ ಎಂದರು.