‘ಈ ಹಗರಣದ ತನಿಖೆಯನ್ನು ಸದ್ಯ ಸಿಐಡಿಗೆ ವಹಿಸಲಾಗಿದೆ. ಆದರೆ, ರಾಜಕೀಯ ಒತ್ತಡಗಳಿಂದಾಗಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುವ ಸಾಧ್ಯತೆ ಕಡಿಮೆ. ಹಾಗಾಗಿ, ಈ ಪ್ರಕರಣವನ್ನು ಕೂಡಲೇ ಸಿಬಿಐಗೆ ವಹಿಸುವುದು ಸೂಕ್ತ. ಈ ಬಗ್ಗೆ ಸರ್ಕಾರ ಮಧ್ಯಪ್ರವೇಶಿಸಿ, ಗ್ರಾಹಕರಿಗೆ ಹಣ ವಾಪಸ್ ಕೊಡಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು’ ಎಂದು ಆಗ್ರಹಿಸಿದರು.