‘ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಯಾವುದೇ ನ್ಯಾಯ ಮತ್ತು ಪರಿಹಾರಗಳು ಸಿಗುತ್ತಿಲ್ಲ. ಇಲಾಖೆಯ ಸಚಿವರೂ ಅವರ ನೆರವಿಗೆ ಧಾವಿಸಿಲ್ಲ. ಹಾಗಾಗಿ, ಈ ಅನ್ಯಾಯಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ತಮಟೆ ಹಾಗೂ ಡೊಳ್ಳುಗಳೊಂದಿಗೆ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಹೇಳಿದರು.