ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ (ಪಿಎಂಕೆಎಸ್ವೈ) ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ತುಂಗಾ ಮೇಲ್ದಂಡೆ, ಭೀಮಾ ಏತ ನೀರಾವರಿ, ಕಾರಂಜಾ, ರಾಮೇಶ್ವರ ಏತ ನೀರಾವರಿ, ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಗಳನ್ನು ಪೂರ್ಣಗೊಳಿಸಬೇಕಿದೆ. ಇದಕ್ಕಾಗಿ₹439 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಹಣ ಬಿಡುಗಡೆಮಾಡುವುದಾಗಿ ಶೆಖಾವತ್ ಭರವಸೆ ನೀಡಿದರು.