<p><strong>ಬೆಂಗಳೂರು:</strong> ಬೆಂಗಳೂರು ನಗರದ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ರೂಪಿಸಿರುವ ಮೇಕೆದಾಟು ಅಣೆಕಟ್ಟೆ ನಿರ್ಮಾಣ ಯೋಜನೆಗೆ ಶೀಘ್ರ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಕೊಡಿಸುವಂತೆಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.</p>.<p>ನಗರಕ್ಕೆ ಸೋಮವಾರ ಭೇಟಿನೀಡಿದ್ದ ಸಚಿವರ ಜತೆ ಮುಖ್ಯಮಂತ್ರಿ ಚರ್ಚಿಸಿದರು.ಮೇಕೆದಾಟು ಯೋಜನೆ ಪೂರ್ಣಗೊಂಡರೆ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಲು ಅನುಕೂಲವಾಗುತ್ತದೆ. ಯಾವುದೇ ರೀತಿಯಲ್ಲೂ ವಿವಾದ ತಲೆದೋರದಂತೆ ಕಾನೂನು ವ್ಯಾಪ್ತಿಯಲ್ಲೇ ಒಪ್ಪಿಗೆ ಕೊಡಿಸುವಂತೆ ಮನವಿ ಮಾಡಿದರು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.</p>.<p><strong>ಗೆಜೆಟ್ ಪ್ರಕಟಣೆಗೆ ಆಗ್ರಹ:</strong></p>.<p>ಮಹದಾಯಿ ಹಾಗೂ ಕೃಷ್ಣಾ ನದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಗೆಜೆಟ್ನಲ್ಲಿ ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.</p>.<p>ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ (ಪಿಎಂಕೆಎಸ್ವೈ) ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ತುಂಗಾ ಮೇಲ್ದಂಡೆ, ಭೀಮಾ ಏತ ನೀರಾವರಿ, ಕಾರಂಜಾ, ರಾಮೇಶ್ವರ ಏತ ನೀರಾವರಿ, ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಗಳನ್ನು ಪೂರ್ಣಗೊಳಿಸಬೇಕಿದೆ. ಇದಕ್ಕಾಗಿ₹439 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಹಣ ಬಿಡುಗಡೆಮಾಡುವುದಾಗಿ ಶೆಖಾವತ್ ಭರವಸೆ ನೀಡಿದರು.</p>.<p><strong>ನದಿ ಜೋಡಣೆ:</strong></p>.<p>ಕೃಷ್ಣಾ, ಕಾವೇರಿ, ಗೋದಾವರಿ ಮತ್ತು ಪೆನ್ನಾರ್ ನದಿಗಳ ಜಲಾನಯನ ಪ್ರದೇಶಗಳಲ್ಲಿನ ನದಿಗಳ ಜೋಡಣೆ ಮಾಡಿದರೆ ರಾಜ್ಯಕ್ಕೆ ನೀರಿನ ಲಭ್ಯತೆ ಹೆಚ್ಚಲಿದೆ. ಈ ಕಾರ್ಯಕ್ಕೆ ಶೀಘ್ರ ಚಾಲನೆ ಕೊಡುವಂತೆ ಯಡಿಯೂರಪ್ಪ ಮನವಿ ಮಾಡಿದರು. ‘ಇದು ಪ್ರಧಾನಿ ನರೇಂದ್ರ ಮೋದಿ ಅವರ ಆದ್ಯತೆಯ ವಿಷಯವಾಗಿದ್ದು, ನದಿ ಜೋಡಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ನಗರದ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ರೂಪಿಸಿರುವ ಮೇಕೆದಾಟು ಅಣೆಕಟ್ಟೆ ನಿರ್ಮಾಣ ಯೋಜನೆಗೆ ಶೀಘ್ರ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಕೊಡಿಸುವಂತೆಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.</p>.<p>ನಗರಕ್ಕೆ ಸೋಮವಾರ ಭೇಟಿನೀಡಿದ್ದ ಸಚಿವರ ಜತೆ ಮುಖ್ಯಮಂತ್ರಿ ಚರ್ಚಿಸಿದರು.ಮೇಕೆದಾಟು ಯೋಜನೆ ಪೂರ್ಣಗೊಂಡರೆ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಲು ಅನುಕೂಲವಾಗುತ್ತದೆ. ಯಾವುದೇ ರೀತಿಯಲ್ಲೂ ವಿವಾದ ತಲೆದೋರದಂತೆ ಕಾನೂನು ವ್ಯಾಪ್ತಿಯಲ್ಲೇ ಒಪ್ಪಿಗೆ ಕೊಡಿಸುವಂತೆ ಮನವಿ ಮಾಡಿದರು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.</p>.<p><strong>ಗೆಜೆಟ್ ಪ್ರಕಟಣೆಗೆ ಆಗ್ರಹ:</strong></p>.<p>ಮಹದಾಯಿ ಹಾಗೂ ಕೃಷ್ಣಾ ನದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಗೆಜೆಟ್ನಲ್ಲಿ ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.</p>.<p>ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ (ಪಿಎಂಕೆಎಸ್ವೈ) ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ತುಂಗಾ ಮೇಲ್ದಂಡೆ, ಭೀಮಾ ಏತ ನೀರಾವರಿ, ಕಾರಂಜಾ, ರಾಮೇಶ್ವರ ಏತ ನೀರಾವರಿ, ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಗಳನ್ನು ಪೂರ್ಣಗೊಳಿಸಬೇಕಿದೆ. ಇದಕ್ಕಾಗಿ₹439 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಹಣ ಬಿಡುಗಡೆಮಾಡುವುದಾಗಿ ಶೆಖಾವತ್ ಭರವಸೆ ನೀಡಿದರು.</p>.<p><strong>ನದಿ ಜೋಡಣೆ:</strong></p>.<p>ಕೃಷ್ಣಾ, ಕಾವೇರಿ, ಗೋದಾವರಿ ಮತ್ತು ಪೆನ್ನಾರ್ ನದಿಗಳ ಜಲಾನಯನ ಪ್ರದೇಶಗಳಲ್ಲಿನ ನದಿಗಳ ಜೋಡಣೆ ಮಾಡಿದರೆ ರಾಜ್ಯಕ್ಕೆ ನೀರಿನ ಲಭ್ಯತೆ ಹೆಚ್ಚಲಿದೆ. ಈ ಕಾರ್ಯಕ್ಕೆ ಶೀಘ್ರ ಚಾಲನೆ ಕೊಡುವಂತೆ ಯಡಿಯೂರಪ್ಪ ಮನವಿ ಮಾಡಿದರು. ‘ಇದು ಪ್ರಧಾನಿ ನರೇಂದ್ರ ಮೋದಿ ಅವರ ಆದ್ಯತೆಯ ವಿಷಯವಾಗಿದ್ದು, ನದಿ ಜೋಡಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>