ಬೆಂಗಳೂರಿನ ಉತ್ತರ ಭಾಗದಲ್ಲಿ ರುವ 65 ಕಿ.ಮೀ. ವರ್ತುಲ ರಸ್ತೆ ಅಭಿವೃದ್ಧಿಗೆ 2005ರಲ್ಲಿ ಬಿಡಿಎ ಯೋಜನೆ ರೂಪಿಸಿ, 1,810 ಎಕರೆ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳಲು ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಆದರೆ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇದರಿಂದ ಈ ಭಾಗದ ರೈತ ಕುಟುಂಬಗಳು ಕಂಗಾಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ಬಿಡಿಎ ಮತ್ತು ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಿದರೂ ರೈತರಿಗೆ ಪರಿಹಾರ ನೀಡುವ ಕುರಿತು ತೀರ್ಮಾನ ಕೈಗೊಂಡಿಲ್ಲ ಎಂದು ಸಮಿತಿ ಸದಸ್ಯ ಶ್ರೀನಿವಾಸ ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.