<p><strong>ಬೆಂಗಳೂರು:</strong> ‘ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಸರ್ಕಾರ ಹೊರಡಿಸಿರುವ ಕರಡು ನಿಯಮಗಳಲ್ಲಿ ಹಲವು ಲೋಪದೋಷಗಳಿದ್ದು,ಕನಿಷ್ಠ ವಯಸ್ಸು 25 ಎಂದು ನಮೂದಿಸಿದ್ದು ಹಾಸ್ಯಾಸ್ಪದ’ ಎಂದುಸರ್ಕಾರಿ ಕಾಲೇಜು ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ್ ಹೇಳಿದ್ದಾರೆ.</p>.<p>‘ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾರ್ಗಸೂಚಿಯಂತೆ ಪ್ರಾಂಶುಪಾಲರ ನೇಮಕಾತಿಗೆ ಸಂದರ್ಶನ ನಡೆಸಬೇಕು ಎಂದು ಹೇಳಲಾಗಿದೆ. ಆದರೆ ಇದಕ್ಕೆ ವಿರುದ್ಧವಾಗಿಕರಡು ನಿಯಮಗಳಲ್ಲಿ ಲಿಖಿತ ಪರೀಕ್ಷೆಗೆ ತಿಳಿಸಲಾಗಿದೆ. ಒಬಿಸಿಯವರಿಗೆ ಮೀಸಲಾತಿ ಕಲ್ಪಿಸುವಲ್ಲಿ ಆದಾಯ ಮಿತಿಯನ್ನು ₹ 8 ಲಕ್ಷದಿಂದ ಹೆಚ್ಚಿಸದೆ ಇರುವುದರಿಂದ ಅವರಿಗೆ ಅವಕಾಶ ತಪ್ಪಿಹೋಗುವ ಅಪಾಯ ಇದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>‘ಪ್ರಾಂಶುಪಾಲರ ನೇಮಕಕ್ಕೆ ಪಿಎಚ್.ಡಿ.ಕಡ್ಡಾಯ. ಆದರೆ ಷರತ್ತಿನಲ್ಲಿಪಿಎಚ್.ಡಿ. ಪದವಿಗೆ ಮುಂಗಡ ವೇತನ ಬಡ್ತಿ ಮಂಜೂರಾಗಿದ್ದಲ್ಲಿ, ಮುಂದೆ ಅಕಾಡೆಮಿಕ್ ಪರ್ಫಾಮೆನ್ಸ್ ಇಂಡಿಕೇಟರ್ನ(ಎಪಿಐ) ಯಾವುದೇ ಸೌಲಭ್ಯಗಳಿಗೆ ಬಳಸಿಕೊಳ್ಳುವಂತಿಲ್ಲ ಎಂದು ತಿಳಿಸಲಾಗಿದೆ. ಇದು ಮತ್ತೊಂದು ದೊಡ್ಡ ಲೋಪ’ ಎಂದು ಹಲವು ಪ್ರಾಧ್ಯಾಪಕರು ದೂರಿದ್ದಾರೆ.</p>.<p>‘ಕನಿಷ್ಠ ವಯೋಮಿತಿ, ಮೀಸಲಾತಿಯಂತಹ ಲೋಪಗಳನ್ನು ಉದ್ದೇಶಪೂರ್ವಕವಾಗಿಯೇ ಕರಡಿನಲ್ಲಿ ಉಳಿಸಿ, ಗಮನ ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆದಂತಿದೆ. ಸಾರ್ವಜನಿಕರಿಂದ ವ್ಯಕ್ತವಾಗುವ ಆಕ್ಷೇಪಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಸರಿಪಡಿ<br />ಸುವ ಹಾಗೂ ಶೀಘ್ರ ನೇಮಕಾತಿ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>2009ರಿಂದೀಚೆಗೆ ಪದವಿ ಕಾಲೇಜುಗಳ ಪ್ರಾಂಶುಪಾಲರ ನೇಮಕಾತಿ ನಡೆದಿಲ್ಲ. 2017ರಿಂದೀಚೆಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ನಡೆದಿಲ್ಲ. ಹೀಗಾಗಿ ಬಹಳ ದಿನಗಳ ಬಳಿಕ ಸರ್ಕಾರದಿಂದ ಹೊರಬಿದ್ದಿರುವ ಈ ನಿಯಮಗಳಲ್ಲೇ ಇರುವ ದೊಡ್ಡ ಲೋಪಗಳ ಬಗ್ಗೆ ವ್ಯಾಪಕ ಟೀಕೆ ಕೇಳಿಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಸರ್ಕಾರ ಹೊರಡಿಸಿರುವ ಕರಡು ನಿಯಮಗಳಲ್ಲಿ ಹಲವು ಲೋಪದೋಷಗಳಿದ್ದು,ಕನಿಷ್ಠ ವಯಸ್ಸು 25 ಎಂದು ನಮೂದಿಸಿದ್ದು ಹಾಸ್ಯಾಸ್ಪದ’ ಎಂದುಸರ್ಕಾರಿ ಕಾಲೇಜು ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ್ ಹೇಳಿದ್ದಾರೆ.</p>.<p>‘ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾರ್ಗಸೂಚಿಯಂತೆ ಪ್ರಾಂಶುಪಾಲರ ನೇಮಕಾತಿಗೆ ಸಂದರ್ಶನ ನಡೆಸಬೇಕು ಎಂದು ಹೇಳಲಾಗಿದೆ. ಆದರೆ ಇದಕ್ಕೆ ವಿರುದ್ಧವಾಗಿಕರಡು ನಿಯಮಗಳಲ್ಲಿ ಲಿಖಿತ ಪರೀಕ್ಷೆಗೆ ತಿಳಿಸಲಾಗಿದೆ. ಒಬಿಸಿಯವರಿಗೆ ಮೀಸಲಾತಿ ಕಲ್ಪಿಸುವಲ್ಲಿ ಆದಾಯ ಮಿತಿಯನ್ನು ₹ 8 ಲಕ್ಷದಿಂದ ಹೆಚ್ಚಿಸದೆ ಇರುವುದರಿಂದ ಅವರಿಗೆ ಅವಕಾಶ ತಪ್ಪಿಹೋಗುವ ಅಪಾಯ ಇದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>‘ಪ್ರಾಂಶುಪಾಲರ ನೇಮಕಕ್ಕೆ ಪಿಎಚ್.ಡಿ.ಕಡ್ಡಾಯ. ಆದರೆ ಷರತ್ತಿನಲ್ಲಿಪಿಎಚ್.ಡಿ. ಪದವಿಗೆ ಮುಂಗಡ ವೇತನ ಬಡ್ತಿ ಮಂಜೂರಾಗಿದ್ದಲ್ಲಿ, ಮುಂದೆ ಅಕಾಡೆಮಿಕ್ ಪರ್ಫಾಮೆನ್ಸ್ ಇಂಡಿಕೇಟರ್ನ(ಎಪಿಐ) ಯಾವುದೇ ಸೌಲಭ್ಯಗಳಿಗೆ ಬಳಸಿಕೊಳ್ಳುವಂತಿಲ್ಲ ಎಂದು ತಿಳಿಸಲಾಗಿದೆ. ಇದು ಮತ್ತೊಂದು ದೊಡ್ಡ ಲೋಪ’ ಎಂದು ಹಲವು ಪ್ರಾಧ್ಯಾಪಕರು ದೂರಿದ್ದಾರೆ.</p>.<p>‘ಕನಿಷ್ಠ ವಯೋಮಿತಿ, ಮೀಸಲಾತಿಯಂತಹ ಲೋಪಗಳನ್ನು ಉದ್ದೇಶಪೂರ್ವಕವಾಗಿಯೇ ಕರಡಿನಲ್ಲಿ ಉಳಿಸಿ, ಗಮನ ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆದಂತಿದೆ. ಸಾರ್ವಜನಿಕರಿಂದ ವ್ಯಕ್ತವಾಗುವ ಆಕ್ಷೇಪಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಸರಿಪಡಿ<br />ಸುವ ಹಾಗೂ ಶೀಘ್ರ ನೇಮಕಾತಿ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>2009ರಿಂದೀಚೆಗೆ ಪದವಿ ಕಾಲೇಜುಗಳ ಪ್ರಾಂಶುಪಾಲರ ನೇಮಕಾತಿ ನಡೆದಿಲ್ಲ. 2017ರಿಂದೀಚೆಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ನಡೆದಿಲ್ಲ. ಹೀಗಾಗಿ ಬಹಳ ದಿನಗಳ ಬಳಿಕ ಸರ್ಕಾರದಿಂದ ಹೊರಬಿದ್ದಿರುವ ಈ ನಿಯಮಗಳಲ್ಲೇ ಇರುವ ದೊಡ್ಡ ಲೋಪಗಳ ಬಗ್ಗೆ ವ್ಯಾಪಕ ಟೀಕೆ ಕೇಳಿಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>