<p><strong>ಬೆಂಗಳೂರು</strong>: ಪದ್ಮಶ್ರೀ ವಿದ್ಯಾಲಯವು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ 21ನೇ ಶತಮಾನಕ್ಕೆ ಅಗತ್ಯವಿರುವ ಕೌಶಲಗಳನ್ನು ಮೈಗೂಡಿಸಲು ಆದ್ಯತೆ ನೀಡುತ್ತಿರುವುದು ಅನುಕರಣೀಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಎಸ್.ಎಂ.ಜಯಕರ ಶ್ಲಾಘಿಸಿದರು.</p>.<p> ‘ಪದ್ಮಶ್ರೀ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ ಸೈನ್ಸಸ್’ ನ್ಯಾಕ್ ಎ++ ಮಾನ್ಯತೆ ಪಡೆದು ಸ್ವಾಯತ್ತ ಶಿಕ್ಷಣ ಸಂಸ್ಥೆ ಸ್ಥಾನಮಾನಕ್ಕೆ ಪದಾರ್ಪಣೆ ಮಾಡಿದ ಪ್ರಯುಕ್ತ ಕೊಮ್ಮಘಟ್ಟದಲ್ಲಿರುವ ಕ್ಯಾಂಪಸ್ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ‘ನವೋತ್ಥಾನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಾಸಕ ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ‘ಸಂಸ್ಥೆಯ ಬೋಧಕ ಸಿಬ್ಬಂದಿಯ ಪರಿಶ್ರಮ ಹಾಗೂ ಕಾಳಜಿಯಿಂದಾಗಿ ಈ ಸ್ಥಾನಮಾನ ಸಿಕ್ಕಿದೆ’ ಎಂದು ತಿಳಿಸಿದರು.</p>.<p>ಸಂಸ್ಥೆಯ ಪ್ರಾಂಶುಪಾಲರಾದ ಅನುರಾಧಾ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಟಿ.ಕೆ. ನಾರಾಯಣಪ್ಪ, ಅಧ್ಯಕ್ಷ ಸತೀಶ್, ನಿರ್ದೇಶಕರಾದ ರಾಜೇಶ್ ಶೆಣೈ, ಶಿವಪ್ರಸಾದ್, ಶ್ಯಾಮ್, ರಾಜಣ್ಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪದ್ಮಶ್ರೀ ವಿದ್ಯಾಲಯವು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ 21ನೇ ಶತಮಾನಕ್ಕೆ ಅಗತ್ಯವಿರುವ ಕೌಶಲಗಳನ್ನು ಮೈಗೂಡಿಸಲು ಆದ್ಯತೆ ನೀಡುತ್ತಿರುವುದು ಅನುಕರಣೀಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಎಸ್.ಎಂ.ಜಯಕರ ಶ್ಲಾಘಿಸಿದರು.</p>.<p> ‘ಪದ್ಮಶ್ರೀ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ ಸೈನ್ಸಸ್’ ನ್ಯಾಕ್ ಎ++ ಮಾನ್ಯತೆ ಪಡೆದು ಸ್ವಾಯತ್ತ ಶಿಕ್ಷಣ ಸಂಸ್ಥೆ ಸ್ಥಾನಮಾನಕ್ಕೆ ಪದಾರ್ಪಣೆ ಮಾಡಿದ ಪ್ರಯುಕ್ತ ಕೊಮ್ಮಘಟ್ಟದಲ್ಲಿರುವ ಕ್ಯಾಂಪಸ್ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ‘ನವೋತ್ಥಾನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಾಸಕ ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ‘ಸಂಸ್ಥೆಯ ಬೋಧಕ ಸಿಬ್ಬಂದಿಯ ಪರಿಶ್ರಮ ಹಾಗೂ ಕಾಳಜಿಯಿಂದಾಗಿ ಈ ಸ್ಥಾನಮಾನ ಸಿಕ್ಕಿದೆ’ ಎಂದು ತಿಳಿಸಿದರು.</p>.<p>ಸಂಸ್ಥೆಯ ಪ್ರಾಂಶುಪಾಲರಾದ ಅನುರಾಧಾ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಟಿ.ಕೆ. ನಾರಾಯಣಪ್ಪ, ಅಧ್ಯಕ್ಷ ಸತೀಶ್, ನಿರ್ದೇಶಕರಾದ ರಾಜೇಶ್ ಶೆಣೈ, ಶಿವಪ್ರಸಾದ್, ಶ್ಯಾಮ್, ರಾಜಣ್ಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>