‘ಎಲ್ಲರಿಗೂ ಬಿಡುಗಡೆಯ ಪ್ರಮಾಣ ಪತ್ರ ನೀಡಿ ಕಳುಹಿಸಲಾಯಿತು. ಇನ್ಮುಂದೆ ಈ ರೀತಿಯ ಪ್ರಮಾದ ಎಸಗುವುದಿಲ್ಲ ಎಂಬುದಾಗಿ ಸಹಿ ಹಾಕಿಸಿಕೊಂಡು ಕಳುಹಿಸಲಾಯಿತು. ಅವರಿಗೆ ಹೂವು ನೀಡಿ ಬೀಳ್ಕೊಡಲಾಯಿತು. ಅವಧಿ ಪೂರ್ವ ಬಿಡುಗಡೆಯಾದ ಎಲ್ಲರೂ ರಾಜ್ಯದ ಕೈದಿಗಳು. ಜೈಲಿನಲ್ಲಿ ಉತ್ತಮ ನಡತೆ ತೋರಿದ್ದ ಅರ್ಹ ಕೈದಿಗಳ ಬಿಡುಗಡೆಗೆ ಕಾರಾಗೃಹಗಳ ಸ್ಥಾಯಿ ಸಲಹಾ ಮಂಡಳಿಗಳ ವರದಿ ಸಮೇತ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿತ್ತು. ಈ ಹಿಂದೆಯೇ ಬಿಡುಗಡೆ ಆಗಬೇಕಿತ್ತು. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ವಿಳಂಬವಾಗಿತ್ತು’ ಎಂದು ಸಿಬ್ಬಂದಿ ಹೇಳಿದರು.