<p><strong>ಬೆಂಗಳೂರು:</strong> ತೆರಿಗೆ ಪಾವತಿಸದೇ ವಂಚಿಸುತ್ತಿದ್ದ ಖಾಸಗಿ ಬಸ್ಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.</p>.<p>ನಗರದ ಹೊರ ವಲಯದ ಅತ್ತಿಬೆಲೆ ಚೆಕ್ಪೋಸ್ಟ್ನಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೇ ಜಂಟಿ ಆಯುಕ್ತರಾದ ಎಂ.ಪಿ.ಓಂಕಾರೇಶ್ವರಿ, ಎಂ.ಶೋಭಾ, ಎನ್.ಜಿ.ಗಾಯತ್ರಿದೇವಿ ಅವರ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ತೆರಿಗೆ ಪಾವತಿಸದೇ ಬಸ್ನಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದುದು ಕಂಡು ಬಂತು. 30ಕ್ಕೂ ಹೆಚ್ಚು ಬಸ್ಗಳನ್ನು ಈ ವೇಳೆ ವಶಪಡಿಸಿಕೊಳ್ಳಲಾಯಿತು. </p>.<p>ಬಸ್ನಲ್ಲಿ ಪ್ರಯಾಣಿಸುತ್ತಿದ್ದವರಿಗೆ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಸಿಬ್ಬಂದಿ ಮಾಡಿದರು. ಪ್ರಯಾಣಿಕರಿಂದ ಯಾವುದೇ ಹಣ ಪಡೆಯದೇ ನಿಗದಿತ ಸ್ಥಳಗಳಿಗೆ ಬಿಡಲು ವ್ಯವಸ್ಥೆಯನ್ನೂ ಮಾಡಲಾಯಿತು.</p>.<p>ಈ ವೇಳೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ದೀಪಕ್, ಪ್ರಮತೇಶ ಹಾಗೂ ರಾಜಕುಮಾರ್, ಮೋಟಾರು ವಾಹನ ನಿರೀಕ್ಷಕರಾದ ನವೀನ, ವಿಶ್ವನಾಥ್ ಶೆಟ್ಟಿ, ಅಮೂಲ್ಯಾ, ಸುಧಾಕರ್, ನರಸಿಂಹಮೂರ್ತಿ ಹಾಗೂ ರಾಜೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತೆರಿಗೆ ಪಾವತಿಸದೇ ವಂಚಿಸುತ್ತಿದ್ದ ಖಾಸಗಿ ಬಸ್ಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.</p>.<p>ನಗರದ ಹೊರ ವಲಯದ ಅತ್ತಿಬೆಲೆ ಚೆಕ್ಪೋಸ್ಟ್ನಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೇ ಜಂಟಿ ಆಯುಕ್ತರಾದ ಎಂ.ಪಿ.ಓಂಕಾರೇಶ್ವರಿ, ಎಂ.ಶೋಭಾ, ಎನ್.ಜಿ.ಗಾಯತ್ರಿದೇವಿ ಅವರ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ತೆರಿಗೆ ಪಾವತಿಸದೇ ಬಸ್ನಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದುದು ಕಂಡು ಬಂತು. 30ಕ್ಕೂ ಹೆಚ್ಚು ಬಸ್ಗಳನ್ನು ಈ ವೇಳೆ ವಶಪಡಿಸಿಕೊಳ್ಳಲಾಯಿತು. </p>.<p>ಬಸ್ನಲ್ಲಿ ಪ್ರಯಾಣಿಸುತ್ತಿದ್ದವರಿಗೆ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಸಿಬ್ಬಂದಿ ಮಾಡಿದರು. ಪ್ರಯಾಣಿಕರಿಂದ ಯಾವುದೇ ಹಣ ಪಡೆಯದೇ ನಿಗದಿತ ಸ್ಥಳಗಳಿಗೆ ಬಿಡಲು ವ್ಯವಸ್ಥೆಯನ್ನೂ ಮಾಡಲಾಯಿತು.</p>.<p>ಈ ವೇಳೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ದೀಪಕ್, ಪ್ರಮತೇಶ ಹಾಗೂ ರಾಜಕುಮಾರ್, ಮೋಟಾರು ವಾಹನ ನಿರೀಕ್ಷಕರಾದ ನವೀನ, ವಿಶ್ವನಾಥ್ ಶೆಟ್ಟಿ, ಅಮೂಲ್ಯಾ, ಸುಧಾಕರ್, ನರಸಿಂಹಮೂರ್ತಿ ಹಾಗೂ ರಾಜೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>