<p><strong>ಬೆಂಗಳೂರು</strong>: ‘ಖಾಸಗಿ ವಿಶ್ವವಿದ್ಯಾಲಯಗಳು ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿವೆ. 21 ನೇ ಶತಮಾನದ ಸವಾಲುಗಳಿಗೆ ಭಾರತದ ಯುವ ಸಮುದಾಯವನ್ನು ರೂಪಿಸಲು ಬದ್ಧವಾಗಿವೆ’ ಎಂದು ಸಿಎಂಆರ್ ವಿಶ್ವವಿದ್ಯಾಲಯ ಮತ್ತು ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಸಿ. ರಾಮಮೂರ್ತಿ ಹೇಳಿದರು.</p>.<p>ಬಾಗಲೂರಿನಲ್ಲಿರುವ ಲೇಕ್ ಸೈಡ್ ಕ್ಯಾಂಪಸ್ ಸಭಾಂಗಣದಲ್ಲಿ ಶನಿವಾರ ಸಿಎಂಆರ್ ವಿಶ್ವವಿದ್ಯಾಲಯ ಹಾಗೂ ಕರ್ನಾಟಕದ ವಿಶ್ರಾಂತ ಕುಲಪತಿಗಳ ವೇದಿಕೆ (ಎಫ್ವಿಸಿಕೆ) ಆಯೋಜಿಸಿದ್ದ ‘ಕರ್ನಾಟಕದಲ್ಲಿ ಖಾಸಗಿ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆ’ ಒಂದು ದಿನದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>‘ಖಾಸಗಿ ವಿಶ್ವವಿದ್ಯಾಲಯಗಳನ್ನು ಬಲಪಡಿಸಲು, ವಿಶ್ವಾಸಾರ್ಹತೆ ಹೆಚ್ಚಿಸಲು, ಪೂರ್ಣ ಸಾಮರ್ಥ್ಯದಿಂದ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕು. ಅದಕ್ಕೆ ಬೇಕಾದ ರಚನಾತ್ಮಕ ಮಾರ್ಗವನ್ನು ತಯಾರಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಎಫ್ವಿಸಿಕೆ ಅಧ್ಯಕ್ಷ ಎಸ್. ಚಂದ್ರಶೇಖರ್ ಶೆಟ್ಟಿ ಉದ್ಘಾಟಿಸಿದರು. ಕಾರ್ಯದರ್ಶಿ ಎಚ್. ಮಹೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಎಂಆರ್ ವಿಶ್ವವಿದ್ಯಾಲಯದ ಕುಲಪತಿ ಎಚ್. ಬಿ. ರಾಘವೇಂದ್ರ, ಸಿಎಂಆರ್ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಪ್ರವೀಣ್ ಆರ್., ಕುಲಸಚಿವ ಧನಂಜಯ ಎಂ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಖಾಸಗಿ ವಿಶ್ವವಿದ್ಯಾಲಯಗಳು ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿವೆ. 21 ನೇ ಶತಮಾನದ ಸವಾಲುಗಳಿಗೆ ಭಾರತದ ಯುವ ಸಮುದಾಯವನ್ನು ರೂಪಿಸಲು ಬದ್ಧವಾಗಿವೆ’ ಎಂದು ಸಿಎಂಆರ್ ವಿಶ್ವವಿದ್ಯಾಲಯ ಮತ್ತು ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಸಿ. ರಾಮಮೂರ್ತಿ ಹೇಳಿದರು.</p>.<p>ಬಾಗಲೂರಿನಲ್ಲಿರುವ ಲೇಕ್ ಸೈಡ್ ಕ್ಯಾಂಪಸ್ ಸಭಾಂಗಣದಲ್ಲಿ ಶನಿವಾರ ಸಿಎಂಆರ್ ವಿಶ್ವವಿದ್ಯಾಲಯ ಹಾಗೂ ಕರ್ನಾಟಕದ ವಿಶ್ರಾಂತ ಕುಲಪತಿಗಳ ವೇದಿಕೆ (ಎಫ್ವಿಸಿಕೆ) ಆಯೋಜಿಸಿದ್ದ ‘ಕರ್ನಾಟಕದಲ್ಲಿ ಖಾಸಗಿ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆ’ ಒಂದು ದಿನದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>‘ಖಾಸಗಿ ವಿಶ್ವವಿದ್ಯಾಲಯಗಳನ್ನು ಬಲಪಡಿಸಲು, ವಿಶ್ವಾಸಾರ್ಹತೆ ಹೆಚ್ಚಿಸಲು, ಪೂರ್ಣ ಸಾಮರ್ಥ್ಯದಿಂದ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕು. ಅದಕ್ಕೆ ಬೇಕಾದ ರಚನಾತ್ಮಕ ಮಾರ್ಗವನ್ನು ತಯಾರಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಎಫ್ವಿಸಿಕೆ ಅಧ್ಯಕ್ಷ ಎಸ್. ಚಂದ್ರಶೇಖರ್ ಶೆಟ್ಟಿ ಉದ್ಘಾಟಿಸಿದರು. ಕಾರ್ಯದರ್ಶಿ ಎಚ್. ಮಹೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಎಂಆರ್ ವಿಶ್ವವಿದ್ಯಾಲಯದ ಕುಲಪತಿ ಎಚ್. ಬಿ. ರಾಘವೇಂದ್ರ, ಸಿಎಂಆರ್ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಪ್ರವೀಣ್ ಆರ್., ಕುಲಸಚಿವ ಧನಂಜಯ ಎಂ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>