<p><strong>ಬೆಂಗಳೂರು:</strong> ಬೇಸಿಗೆ ಆರಂಭವಾಗುತ್ತಿರುವ ಕಾರಣ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮೇಲ್ವಿಚಾರಣೆಗಾಗಿ 10 ದಿನದೊಳಗೆ ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚಿಸಿ ಕಾರ್ಯಪಡೆ ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ತಿಳಿಸಿದರು.</p>.<p>ಕಾಂಗ್ರೆಸ್ನ ಎಚ್.ಸಿ.ಬಾಲಕೃಷ್ಣ ಅವರ ಗಮನ ಸೆಳೆಯುವ ಸೂಚನೆಗೆ ಪ್ರಿಯಾಂಕ್ ಉತ್ತರಿಸಿದರು.<br>‘ಮುಂದಿನ ವಾರ ನಡೆಯುವ ಕಂದಾಯ, ಪಶುಸಂಗೋಪನಾ ಸಚಿವರು ಸೇರಿದಂತೆ ಹಲವರನ್ನು ಒಳಗೊಂಡ ಸಂಪುಟ ಉಪಸಮಿತಿ ಸಭೆಯಲ್ಲಿ ಬೇಸಿಗೆಯಲ್ಲಿ ಪರಿಸ್ಥಿತಿ ನಿರ್ವಹಣೆ ಬಗ್ಗೆ ಚರ್ಚಿಸಲಾಗುವುದು. ಕಾರ್ಯಪಡೆ ರಚನೆ ಸೇರಿದಂತೆ ಕ್ಷೇತ್ರವಾರು ಅನುದಾನ ಹಂಚಿಕೆ ಬಗ್ಗೆಯೂ ತೀರ್ಮಾನವಾಗಲಿದೆ’ ಎಂದು ಹೇಳಿದರು.</p>.<p>‘ರಾಜ್ಯದಾದ್ಯಂತ ಬೇಸಿಗೆಯಲ್ಲಿ ಪರಿಸ್ಥಿತಿ ನಿರ್ವಹಣೆಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು. ಕಳೆದ 10- 15 ವರ್ಷಗಳಲ್ಲಿ ಬೇಸಿಗೆಯಲ್ಲಿನೀರಿನ ಅಭಾವ ಸೃಷ್ಟಿಯಾಗಿದ್ದ ಸ್ಥಳಗಳ ಮಾಹಿತಿ ಇದೆ. ಪ್ರತಿ ಜಿಲ್ಲಾ ಪಂಚಾಯಿತಿ ವತಿಯಿಂದಲೂ ಮಾಹಿತಿ ಸಂಗ್ರಹಿಸಲಾಗಿದೆ. ಆ ಎಲ್ಲ ಮಾಹಿತಿ ಆಧರಿಸಿ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೇಸಿಗೆ ಆರಂಭವಾಗುತ್ತಿರುವ ಕಾರಣ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮೇಲ್ವಿಚಾರಣೆಗಾಗಿ 10 ದಿನದೊಳಗೆ ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚಿಸಿ ಕಾರ್ಯಪಡೆ ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ತಿಳಿಸಿದರು.</p>.<p>ಕಾಂಗ್ರೆಸ್ನ ಎಚ್.ಸಿ.ಬಾಲಕೃಷ್ಣ ಅವರ ಗಮನ ಸೆಳೆಯುವ ಸೂಚನೆಗೆ ಪ್ರಿಯಾಂಕ್ ಉತ್ತರಿಸಿದರು.<br>‘ಮುಂದಿನ ವಾರ ನಡೆಯುವ ಕಂದಾಯ, ಪಶುಸಂಗೋಪನಾ ಸಚಿವರು ಸೇರಿದಂತೆ ಹಲವರನ್ನು ಒಳಗೊಂಡ ಸಂಪುಟ ಉಪಸಮಿತಿ ಸಭೆಯಲ್ಲಿ ಬೇಸಿಗೆಯಲ್ಲಿ ಪರಿಸ್ಥಿತಿ ನಿರ್ವಹಣೆ ಬಗ್ಗೆ ಚರ್ಚಿಸಲಾಗುವುದು. ಕಾರ್ಯಪಡೆ ರಚನೆ ಸೇರಿದಂತೆ ಕ್ಷೇತ್ರವಾರು ಅನುದಾನ ಹಂಚಿಕೆ ಬಗ್ಗೆಯೂ ತೀರ್ಮಾನವಾಗಲಿದೆ’ ಎಂದು ಹೇಳಿದರು.</p>.<p>‘ರಾಜ್ಯದಾದ್ಯಂತ ಬೇಸಿಗೆಯಲ್ಲಿ ಪರಿಸ್ಥಿತಿ ನಿರ್ವಹಣೆಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು. ಕಳೆದ 10- 15 ವರ್ಷಗಳಲ್ಲಿ ಬೇಸಿಗೆಯಲ್ಲಿನೀರಿನ ಅಭಾವ ಸೃಷ್ಟಿಯಾಗಿದ್ದ ಸ್ಥಳಗಳ ಮಾಹಿತಿ ಇದೆ. ಪ್ರತಿ ಜಿಲ್ಲಾ ಪಂಚಾಯಿತಿ ವತಿಯಿಂದಲೂ ಮಾಹಿತಿ ಸಂಗ್ರಹಿಸಲಾಗಿದೆ. ಆ ಎಲ್ಲ ಮಾಹಿತಿ ಆಧರಿಸಿ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>