ಕೆ.ಎನ್. ರಾಜಣ್ಣ ಮಾತನಾಡಿ, ‘ಮುಖ್ಯಮಂತ್ರಿ ಯಾರು ಎನ್ನುವುದನ್ನು ಹೈಕಮಾಂಡ್ ತೀರ್ಮಾನಿಸಲಿದೆ. ಬೇರೆ ಯಾರೇ ಹೇಳಿಕೆ ಕೊಟ್ಟರೂ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗಳು ಇಬ್ಬರೇ ಅಲ್ಲ. ಖರ್ಗೆ, ಪರಮೇಶ್ವರ, ಎಂ.ಬಿ. ಪಾಟೀಲ ಹೆಸರು ಕೂಡ ಕೇಳಿಬರುತ್ತಿಲ್ಲವೇ? ಜನ ಕೂಗುವುದಕ್ಕೆ ನಾವು ಏನು ಮಾಡಲು ಆಗುತ್ತದೆ’ ಎಂದರು.