<p><strong>ಬೆಂಗಳೂರು: </strong>ಡ್ರಗ್ಸ್ ಜಾಲ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದಆದಿತ್ಯ ಆಳ್ವ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಅನುಮಾನದ ಮೇರೆಗೆ, ಆತನ ಸಹೋದರಿ ಪ್ರಿಯಾಂಕಾ ಆಳ್ವ ಅವರಿಗೆ ಸಿಸಿಬಿ ಪೊಲೀಸರು ಎರಡನೇ ಬಾರಿ ನೋಟಿಸ್ ನೀಡಿದ್ದಾರೆ.</p>.<p>ಪ್ರಕರಣ ದಾಖಲಾದಾಗಿನಿಂದಲೂ ತಲೆಮರೆಸಿಕೊಂಡಿರುವ ಆದಿತ್ಯ ಪೊಲೀಸರ ಕೈಗೆ ಸಿಗುತ್ತಿಲ್ಲ. ಆತ, ಮುಂಬೈನಲ್ಲಿದ್ದ ಸಹೋದರಿ ಪ್ರಿಯಾಂಕಾ ಹಾಗೂ ಅವರ ಪತಿ ವಿವೇಕ್ ಒಬೆರಾಯ್ ಮನೆಯಲ್ಲಿದ್ದ ಮಾಹಿತಿ ಇತ್ತೀಚೆಗೆ ಸಿಸಿಬಿಗೆ ಸಿಕ್ಕಿತ್ತು. ಹೀಗಾಗಿ, ಒಬೆರಾಯ್ ಮನೆಯಲ್ಲಿ ಸಿಸಿಬಿ ಪೊಲೀಸರು ಶೋಧ ನಡೆಸಿದ್ದರು.</p>.<p>ಶುಕ್ರವಾರವೇ (ಅ.16) ವಿಚಾರಣೆಗೆ ಹಾಜರಾಗುವಂತೆ ಪೊಲೀಸರು, ಪ್ರಿಯಾಂಕಾ ಅವರಿಗೆ ನೋಟಿಸ್ ನೀಡಿದ್ದರು. ಆದರೆ, ಅವರು ವಿಚಾರಣೆಗೆ ಬಂದಿರಲಿಲ್ಲ. ಇದೀಗ ಎರಡನೇ ಬಾರಿ ಅವರಿಗೆ ನೋಟಿಸ್ ನೀಡಲಾಗಿದ್ದು, ‘ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಅ.20ರಂದು ವಿಚಾರಣೆಗೆ ಹಾಜರಾಗಬೇಕು’ ಎಂದು ಸೂಚಿಸಲಾಗಿದೆ.</p>.<p>‘ಮೊದಲ ಬಾರಿ ನೋಟಿಸ್ ನೀಡಿದಾಗ ಪ್ರಿಯಾಂಕಾ ವಿಚಾರಣೆಗೆ ಬಂದಿಲ್ಲ. ಇದೀಗ ಎರಡನೇ ಬಾರಿ ನೋಟಿಸ್ ನೀಡಲಾಗಿದೆ. ಅವರು ಎರಡನೇ ಬಾರಿಯೂ ಗೈರಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಡ್ರಗ್ಸ್ ಜಾಲ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದಆದಿತ್ಯ ಆಳ್ವ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಅನುಮಾನದ ಮೇರೆಗೆ, ಆತನ ಸಹೋದರಿ ಪ್ರಿಯಾಂಕಾ ಆಳ್ವ ಅವರಿಗೆ ಸಿಸಿಬಿ ಪೊಲೀಸರು ಎರಡನೇ ಬಾರಿ ನೋಟಿಸ್ ನೀಡಿದ್ದಾರೆ.</p>.<p>ಪ್ರಕರಣ ದಾಖಲಾದಾಗಿನಿಂದಲೂ ತಲೆಮರೆಸಿಕೊಂಡಿರುವ ಆದಿತ್ಯ ಪೊಲೀಸರ ಕೈಗೆ ಸಿಗುತ್ತಿಲ್ಲ. ಆತ, ಮುಂಬೈನಲ್ಲಿದ್ದ ಸಹೋದರಿ ಪ್ರಿಯಾಂಕಾ ಹಾಗೂ ಅವರ ಪತಿ ವಿವೇಕ್ ಒಬೆರಾಯ್ ಮನೆಯಲ್ಲಿದ್ದ ಮಾಹಿತಿ ಇತ್ತೀಚೆಗೆ ಸಿಸಿಬಿಗೆ ಸಿಕ್ಕಿತ್ತು. ಹೀಗಾಗಿ, ಒಬೆರಾಯ್ ಮನೆಯಲ್ಲಿ ಸಿಸಿಬಿ ಪೊಲೀಸರು ಶೋಧ ನಡೆಸಿದ್ದರು.</p>.<p>ಶುಕ್ರವಾರವೇ (ಅ.16) ವಿಚಾರಣೆಗೆ ಹಾಜರಾಗುವಂತೆ ಪೊಲೀಸರು, ಪ್ರಿಯಾಂಕಾ ಅವರಿಗೆ ನೋಟಿಸ್ ನೀಡಿದ್ದರು. ಆದರೆ, ಅವರು ವಿಚಾರಣೆಗೆ ಬಂದಿರಲಿಲ್ಲ. ಇದೀಗ ಎರಡನೇ ಬಾರಿ ಅವರಿಗೆ ನೋಟಿಸ್ ನೀಡಲಾಗಿದ್ದು, ‘ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಅ.20ರಂದು ವಿಚಾರಣೆಗೆ ಹಾಜರಾಗಬೇಕು’ ಎಂದು ಸೂಚಿಸಲಾಗಿದೆ.</p>.<p>‘ಮೊದಲ ಬಾರಿ ನೋಟಿಸ್ ನೀಡಿದಾಗ ಪ್ರಿಯಾಂಕಾ ವಿಚಾರಣೆಗೆ ಬಂದಿಲ್ಲ. ಇದೀಗ ಎರಡನೇ ಬಾರಿ ನೋಟಿಸ್ ನೀಡಲಾಗಿದೆ. ಅವರು ಎರಡನೇ ಬಾರಿಯೂ ಗೈರಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>