ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತತ್ವ, ಸಿದ್ಧಾಂತದ ಮೇಲೆ ಚುನಾವಣೆ ನಡೆಯಬೇಕು. ಜಾತಿ, ಭ್ರಷ್ಟಾಚಾರ, ಉಡುಗೊರೆ ಹಂಚಿಕೆಯೇ ಚುನಾವಣೆ ಆಗಬಾರದು. ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷಗಳಲ್ಲಿ ಜಾತಿವಾದಿಗಳು ಮತ್ತು ಭ್ರಷ್ಟರು ಇದ್ದಾರೆ. ಚುನಾವಣೆ ವ್ಯವಸ್ಥೆ ಹದಗೆಟ್ಟಿದೆ. ಚುನಾವಣೆ ಎಂದರೆ ದರೋಡೆ ಎನ್ನುವಂತಾಗಿದೆ’ ಎಂದು ದೂರಿದರು.