<p><strong>ಬೆಂಗಳೂರು:</strong> ದೇಶದಲ್ಲಿರುವ 1,213 ವಿಶ್ವ ವಿದ್ಯಾಲಯಗಳಲ್ಲಿ ಶೇಕಡ 60ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಶೀಘ್ರದಲ್ಲೇ ಭರ್ತಿ ಮಾಡಬೇಕು ಎಂದು ರಾಜೀವಗಾಂಧಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಸ್. ಚಂದ್ರಶೇಖರ ಶೆಟ್ಟಿ ಅವರು ಸರ್ಕಾರವನ್ನು ಒತ್ತಾಯಿಸಿದರು.</p>.<p>ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ(ಬಿಸಿಯು) ನಿರ್ಗಮಿತ ಕುಲಪತಿ ಪ್ರೊ. ಲಿಂಗರಾಜ ಗಾಂಧಿಯವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಸರ್ಕಾರ, ಉನ್ನತ ಶಿಕ್ಷಣದ ಮುನ್ನಡೆಗೆ ಆಯವ್ಯಯದಲ್ಲಿ ಹೆಚ್ಚಿನ ಹಣಕಾಸಿನ ಬೆಂಬಲ ಒದಗಿಸಬೇಕಾದ ಅಗತ್ಯವಿದೆ’ ಎಂದು ಅವರು ಪ್ರತಿಪಾದಿಸಿದರು.</p>.<p>‘ಲಿಂಗರಾಜ ಗಾಂಧಿಯವರು, ಬಿಸಿಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸುವ ಮೂಲಕ, ವಿಶ್ವವಿದ್ಯಾಲಯದ ಪ್ರಗತಿಗೆ ಶ್ರಮಿಸಿದ್ದಾರೆ’ ಎಂದು ಶ್ಲಾಘಿಸಿದರು.</p>.<p>ಅಭಿನಂದನಾ ಭಾಷಣ ಮಾಡಿದ ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಕೆ. ಚಿದಾನಂದ ಗೌಡ ‘ಗ್ರಾಮೀಣ ಪ್ರದೇಶದಿಂದ ಬಂದ ಲಿಂಗರಾಜ ಗಾಂಧಿಯವರು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಗಮನ ಹರಿಸಿದ್ದರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ ಕೃಷ್ಣ ಮಾತನಾಡಿ, ‘ಸರ್ಕಾರಿ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಿಗೆ ಶೀಘ್ರ ಕಾಯಂ ಬೋಧಕರನ್ನು ನೇಮಕ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.</p>.<p>‘ನಾಲ್ಕು ದಶಕಗಳಿಂದ ಉನ್ನತ ಶಿಕ್ಷಣ ಕ್ಷೇತ್ರದ ವಿವಿಧ ಹುದ್ದೆಗಳಲ್ಲಿ ಪ್ರೊ. ಲಿಂಗರಾಜ ಗಾಂಧಿಯವರು ಉತ್ತಮ ಕೆಲಸ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.</p>.<p>ಸಮಾರಂಭದಲ್ಲಿ ಪ್ರೊ.ಲಿಂಗರಾಜ ಗಾಂಧಿ ಮತ್ತು ಸೌಮ್ಯ ಗಾಂಧಿ ದಂಪತಿಯನ್ನು ಅಭಿನಂದಿಸಲಾಯಿತು. </p>.<p>ಮಾಜಿ ಶಿಕ್ಷಣ ಸಚಿವರಾದ ಪ್ರೊ. ಬಿ.ಕೆ. ಚಂದ್ರಶೇಖರ್, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು, ಬಿಸಿಯು ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ಬಿಸಿಯು ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ.ರಮೇಶ್, ಕುಲಸಚಿವ ಟಿ. ಜವರೇಗೌಡರು, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೇಶದಲ್ಲಿರುವ 1,213 ವಿಶ್ವ ವಿದ್ಯಾಲಯಗಳಲ್ಲಿ ಶೇಕಡ 60ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಶೀಘ್ರದಲ್ಲೇ ಭರ್ತಿ ಮಾಡಬೇಕು ಎಂದು ರಾಜೀವಗಾಂಧಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಸ್. ಚಂದ್ರಶೇಖರ ಶೆಟ್ಟಿ ಅವರು ಸರ್ಕಾರವನ್ನು ಒತ್ತಾಯಿಸಿದರು.</p>.<p>ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ(ಬಿಸಿಯು) ನಿರ್ಗಮಿತ ಕುಲಪತಿ ಪ್ರೊ. ಲಿಂಗರಾಜ ಗಾಂಧಿಯವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಸರ್ಕಾರ, ಉನ್ನತ ಶಿಕ್ಷಣದ ಮುನ್ನಡೆಗೆ ಆಯವ್ಯಯದಲ್ಲಿ ಹೆಚ್ಚಿನ ಹಣಕಾಸಿನ ಬೆಂಬಲ ಒದಗಿಸಬೇಕಾದ ಅಗತ್ಯವಿದೆ’ ಎಂದು ಅವರು ಪ್ರತಿಪಾದಿಸಿದರು.</p>.<p>‘ಲಿಂಗರಾಜ ಗಾಂಧಿಯವರು, ಬಿಸಿಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸುವ ಮೂಲಕ, ವಿಶ್ವವಿದ್ಯಾಲಯದ ಪ್ರಗತಿಗೆ ಶ್ರಮಿಸಿದ್ದಾರೆ’ ಎಂದು ಶ್ಲಾಘಿಸಿದರು.</p>.<p>ಅಭಿನಂದನಾ ಭಾಷಣ ಮಾಡಿದ ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಕೆ. ಚಿದಾನಂದ ಗೌಡ ‘ಗ್ರಾಮೀಣ ಪ್ರದೇಶದಿಂದ ಬಂದ ಲಿಂಗರಾಜ ಗಾಂಧಿಯವರು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಗಮನ ಹರಿಸಿದ್ದರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ ಕೃಷ್ಣ ಮಾತನಾಡಿ, ‘ಸರ್ಕಾರಿ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಿಗೆ ಶೀಘ್ರ ಕಾಯಂ ಬೋಧಕರನ್ನು ನೇಮಕ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.</p>.<p>‘ನಾಲ್ಕು ದಶಕಗಳಿಂದ ಉನ್ನತ ಶಿಕ್ಷಣ ಕ್ಷೇತ್ರದ ವಿವಿಧ ಹುದ್ದೆಗಳಲ್ಲಿ ಪ್ರೊ. ಲಿಂಗರಾಜ ಗಾಂಧಿಯವರು ಉತ್ತಮ ಕೆಲಸ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.</p>.<p>ಸಮಾರಂಭದಲ್ಲಿ ಪ್ರೊ.ಲಿಂಗರಾಜ ಗಾಂಧಿ ಮತ್ತು ಸೌಮ್ಯ ಗಾಂಧಿ ದಂಪತಿಯನ್ನು ಅಭಿನಂದಿಸಲಾಯಿತು. </p>.<p>ಮಾಜಿ ಶಿಕ್ಷಣ ಸಚಿವರಾದ ಪ್ರೊ. ಬಿ.ಕೆ. ಚಂದ್ರಶೇಖರ್, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು, ಬಿಸಿಯು ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ಬಿಸಿಯು ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ.ರಮೇಶ್, ಕುಲಸಚಿವ ಟಿ. ಜವರೇಗೌಡರು, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>