‘ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೆ ನ್ಯಾಯಾಲಯ ಅನುಮತಿ ನೀಡಿದೆ. ಆದರೆ, ಅಲ್ಲಿಯೂ ಪ್ರತಿಭಟನೆ ಮಾಡದಂತೆ ತಡೆದಿದ್ದು ಏಕೆ? ಅಂದು ಎಡಪಕ್ಷಗಳು ಪ್ಯಾಲಿಸ್ಟೀನ್ ಕುರಿತು ‘ಯುದ್ಧ ಬೇಡ ಶಾಂತಿ ಬೇಕು’ ಎಂಬ ಘೋಷಣೆಯೊಂದಿಗೆ ಸಭೆ ನಡೆಸಲು ಕೇಳಲಾಗಿತ್ತು. ಆಗಲೂ ನಿರಾಕರಣೆ ಮಾಡಲಾಗಿತ್ತು. ನೂರಾರು ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಮಾಡಿದಾಗ ಎಲ್ಲರನ್ನೂ ಬಂಧಿಸಲಾಗಿತ್ತು. ಅಭಿವ್ಯಕ್ತಿ ಸ್ವಾತಂತ್ರ್ಯದ ದಮನ ಅಂದರೆ ಇದೇನಾ’ ಎಂದು ರಂಗಕರ್ಮಿ ಶಶಿಕಾಂತ ಯಡಹಳ್ಳಿ ಪ್ರಶ್ನಿಸಿದ್ದಾರೆ.