‘ಬಂಧಿತ ಕರಿಯಾ, ರೌಡಿಗಳಾದ ಪರಂದಾಮ ಹಾಗೂ ಬಾಂಬೆ ರವಿ ಸಹಚರ. ಕೊಲೆ, ದರೋಡೆ ಹಾಗೂ ಕೊಲೆಗೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ. ನಿರ್ಮಾಪಕ ಉಮಾಪತಿ ಕೊಲೆಗೆ ಸಂಚು ರೂಪಿಸಿದ್ದ. ಕೆಂಪೇಗೌಡ ನಗರ, ಚಾಮರಾಜಪೇಟೆ, ಬಸವನಗುಡಿ, ಹನುಮಂತನಗರ, ಜಯನಗರ ಠಾಣೆ ವ್ಯಾಪ್ತಿಯಲ್ಲಿ ಕರಿಯಾ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು’ ಎಂದು ಹೇಳಿದರು.