<p><strong>ಬೆಂಗಳೂರು: ‘</strong>ಕನ್ನಡ ಭಾಷೆಯಲ್ಲಿ ವಿಶ್ವಕ್ಕೆ ಬೇಕಾದ ಅಪಾರ ಜ್ಞಾನ ಸಂಪತ್ತಿದೆ. ಅದನ್ನು ಬೇರೆ ಭಾಷೆಗಳಿಗೆ ತಲುಪಿಸುವ ಕೆಲಸವಾಗಬೇಕು’ ಎಂದು ಸಾಹಿತಿ ಪ್ರೊ.ಜಿ.ಅಶ್ವತ್ಥನಾರಾಯಣಭಾನುವಾರ ಅಭಿಪ್ರಾಯಪಟ್ಟರು.</p>.<p>ಕನ್ನಡ ಗೆಳೆಯರ ಬಳಗ ಹಾಗೂ ಕರ್ನಾಟಕ ವಿಕಾಸ ರಂಗ ಜಂಟಿಯಾಗಿ ಹಮ್ಮಿಕೊಂಡಿದ್ದ ‘ಕನ್ನಡ ಬಾವುಟ ಹಾರಿಸಿದವರು ಉಪನ್ಯಾಸ ಮಾಲೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕನ್ನಡ ಭಾಷೆಯ ಉಳಿವು ಹಾಗೂ ಬೆಳವಣಿಗೆಗೆ ಚಳವಳಿಯ ದಿಕ್ಕು ಬದಲಾಗಬೇಕು. ರಾ.ಹ.ದೇಶಪಾಂಡೆ, ಅನ್ನದಾನಪ್ಪ ದೊಡ್ಡಮೇಟಿ, ಮ.ರಾಮಮೂರ್ತಿ, ಶಾಂತವೇರಿ ಗೋಪಾಲಗೌಡ ಅವರೂ ಹಿಂದೆ ಭಾಷೆಗಾಗಿ ಹೋರಾಟ ನಡೆಸಿದ್ದರು. ಅವರು ಶ್ರಮಿಸಿದ ಮಾರ್ಗವನ್ನು ಇಂದಿನ ಚಳವಳಿಗಾರರು ಅನುರಿಸಬೇಕು’ ಎಂದರು.</p>.<p>‘ಕರ್ನಾಟಕಕ್ಕೆ ವಲಸೆ ಬಂದಿರುವವರಿಗೆ ಕನ್ನಡ ಕಲಿಸುವ ಕೆಲಸ ಆಗಬೇಕು. ಈ ಬಗ್ಗೆ ಸರ್ಕಾರ, ಕನ್ನಡ ಹೋರಾಟಗಾರರು ಚಿಂತನೆ ನಡೆಸಬೇಕು’ ಎಂದರು.</p>.<p>ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡ,ಶಾಸನ ತಜ್ಞ ಡಾ.ಆರ್.ಶೇಷಶಾಸ್ತ್ರಿ, ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಕನ್ನಡ ಭಾಷೆಯಲ್ಲಿ ವಿಶ್ವಕ್ಕೆ ಬೇಕಾದ ಅಪಾರ ಜ್ಞಾನ ಸಂಪತ್ತಿದೆ. ಅದನ್ನು ಬೇರೆ ಭಾಷೆಗಳಿಗೆ ತಲುಪಿಸುವ ಕೆಲಸವಾಗಬೇಕು’ ಎಂದು ಸಾಹಿತಿ ಪ್ರೊ.ಜಿ.ಅಶ್ವತ್ಥನಾರಾಯಣಭಾನುವಾರ ಅಭಿಪ್ರಾಯಪಟ್ಟರು.</p>.<p>ಕನ್ನಡ ಗೆಳೆಯರ ಬಳಗ ಹಾಗೂ ಕರ್ನಾಟಕ ವಿಕಾಸ ರಂಗ ಜಂಟಿಯಾಗಿ ಹಮ್ಮಿಕೊಂಡಿದ್ದ ‘ಕನ್ನಡ ಬಾವುಟ ಹಾರಿಸಿದವರು ಉಪನ್ಯಾಸ ಮಾಲೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕನ್ನಡ ಭಾಷೆಯ ಉಳಿವು ಹಾಗೂ ಬೆಳವಣಿಗೆಗೆ ಚಳವಳಿಯ ದಿಕ್ಕು ಬದಲಾಗಬೇಕು. ರಾ.ಹ.ದೇಶಪಾಂಡೆ, ಅನ್ನದಾನಪ್ಪ ದೊಡ್ಡಮೇಟಿ, ಮ.ರಾಮಮೂರ್ತಿ, ಶಾಂತವೇರಿ ಗೋಪಾಲಗೌಡ ಅವರೂ ಹಿಂದೆ ಭಾಷೆಗಾಗಿ ಹೋರಾಟ ನಡೆಸಿದ್ದರು. ಅವರು ಶ್ರಮಿಸಿದ ಮಾರ್ಗವನ್ನು ಇಂದಿನ ಚಳವಳಿಗಾರರು ಅನುರಿಸಬೇಕು’ ಎಂದರು.</p>.<p>‘ಕರ್ನಾಟಕಕ್ಕೆ ವಲಸೆ ಬಂದಿರುವವರಿಗೆ ಕನ್ನಡ ಕಲಿಸುವ ಕೆಲಸ ಆಗಬೇಕು. ಈ ಬಗ್ಗೆ ಸರ್ಕಾರ, ಕನ್ನಡ ಹೋರಾಟಗಾರರು ಚಿಂತನೆ ನಡೆಸಬೇಕು’ ಎಂದರು.</p>.<p>ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡ,ಶಾಸನ ತಜ್ಞ ಡಾ.ಆರ್.ಶೇಷಶಾಸ್ತ್ರಿ, ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>