ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೌಶಲ ಕೇಂದ್ರವನ್ನು ಉದ್ಘಾಟಿಸಿದ ಆರ್ಟ್ ಆಫ್ ಲಿವಿಂಗ್ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ ಗುರೂಜಿ, ‘ನಿರುದ್ಯೋಗ ಸಮಸ್ಯೆ ನಿವಾರಿಸಲು ಸರ್ಕಾರದ ಜತೆಗೆ ಕಂಪನಿಗಳು ಹಾಗೂ ಸರ್ಕಾರೇತರ ಸಂಸ್ಥೆ ಸಹ ಕಾರ್ಯನಿರ್ವಹಿಸಬೇಕಿದೆ. ವಿದ್ಯಾರ್ಥಿಗಳು ಕೌಶಲಗಳನ್ನು ವೃದ್ಧಿಸಿಕೊಂಡಲ್ಲಿ ಸುಲಭವಾಗಿ ಉದ್ಯೋಗ ಪಡೆಯಬಹುದು. ಈ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮಗಳು ಹೆಚ್ಚಬೇಕು’ ಎಂದು ತಿಳಿಸಿದರು.