<p><strong>ಬೆಂಗಳೂರು:</strong> ಅಂಗನವಾಡಿ ಮತ್ತು ಮಕ್ಕಳ ಹಬ್ಬ, ಬೇಟಿ ಬಚಾವೋ ಬೇಟಿ ಪಡಾವೊ ಯೋಜನೆಯನ್ನು ಅನುಷ್ಠಾನ ಮಾಡುವ ಮೂಲಕ ಅಂಗನವಾಡಿಗಳ ಬಲವರ್ಧನೆಗೊಳಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎಸ್. ಕಾಂತರಾಜ್ ತಿಳಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯಿತಿ, ಮಕ್ಕಳ ಜಾಗೃತಿ ಸಂಸ್ಥೆ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಕ್ಕಳ ಮಾನಸಿಕ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಯಲ್ಲಿ ಅಂಗನವಾಡಿಗಳ ಪಾತ್ರ ಮಹತ್ವದ್ದಾಗಿದೆ. ನಗರ ಜಿಲ್ಲೆಯ 249 ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್. ಸಿದ್ದರಾಮಮಣ್ಣ, ಐಟಿಸಿ ಕಂಪನಿಯ ಹರೀಶ್, ಕರಿಯಪ್ಪ, ಮಕ್ಕಳ ಜಾಗೃತಿ ಸಂಸ್ಥೆಯ ಸಿಇಒ ಸುನೈನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ್, ಕಾರ್ಯಕ್ರಮ ಅಧಿಕಾರಿ ಅಶ್ವಿನಿ ಉಪಸ್ಥಿತರಿದ್ದರು.</p>.<p>ವಿವಿಧ ಅಂಗನವಾಡಿಗಳ ಕಾರ್ಯಕರ್ತೆಯರು ಮತ್ತು ಸಹಾಯಕರು ಮಳಿಗೆಗಳನ್ನು ಹಾಕಿ ಜಾಗೃತಿಯ ಫಲಕಗಳನ್ನು ಪ್ರದರ್ಶಿಸಿ, ಪೌಷ್ಟಿಕ ಆಹಾರ ಸಹಿತ ವಿವಿಧ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಂಗನವಾಡಿ ಮತ್ತು ಮಕ್ಕಳ ಹಬ್ಬ, ಬೇಟಿ ಬಚಾವೋ ಬೇಟಿ ಪಡಾವೊ ಯೋಜನೆಯನ್ನು ಅನುಷ್ಠಾನ ಮಾಡುವ ಮೂಲಕ ಅಂಗನವಾಡಿಗಳ ಬಲವರ್ಧನೆಗೊಳಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎಸ್. ಕಾಂತರಾಜ್ ತಿಳಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯಿತಿ, ಮಕ್ಕಳ ಜಾಗೃತಿ ಸಂಸ್ಥೆ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಕ್ಕಳ ಮಾನಸಿಕ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಯಲ್ಲಿ ಅಂಗನವಾಡಿಗಳ ಪಾತ್ರ ಮಹತ್ವದ್ದಾಗಿದೆ. ನಗರ ಜಿಲ್ಲೆಯ 249 ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್. ಸಿದ್ದರಾಮಮಣ್ಣ, ಐಟಿಸಿ ಕಂಪನಿಯ ಹರೀಶ್, ಕರಿಯಪ್ಪ, ಮಕ್ಕಳ ಜಾಗೃತಿ ಸಂಸ್ಥೆಯ ಸಿಇಒ ಸುನೈನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ್, ಕಾರ್ಯಕ್ರಮ ಅಧಿಕಾರಿ ಅಶ್ವಿನಿ ಉಪಸ್ಥಿತರಿದ್ದರು.</p>.<p>ವಿವಿಧ ಅಂಗನವಾಡಿಗಳ ಕಾರ್ಯಕರ್ತೆಯರು ಮತ್ತು ಸಹಾಯಕರು ಮಳಿಗೆಗಳನ್ನು ಹಾಕಿ ಜಾಗೃತಿಯ ಫಲಕಗಳನ್ನು ಪ್ರದರ್ಶಿಸಿ, ಪೌಷ್ಟಿಕ ಆಹಾರ ಸಹಿತ ವಿವಿಧ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>