<p><strong>ಬೆಂಗಳೂರು</strong>: ‘ಕಾಲೇಜಿನಲ್ಲಿ ಆಯೋಜಿಸುವ ಕಾರ್ಯಕ್ರಮಗಳ ಕುರಿತು ಪೊಲೀಸರಿಗೆ ಮೊದಲೇ ಮಾಹಿತಿ ನೀಡಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಸೂಚಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮೊದಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಆಡಳಿತ ಮಂಡಳಿಯವರಿಗೆ ಸೂಚಿಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಆವಲಹಳ್ಳಿಯಲ್ಲಿ ನಡೆದಿದ್ದ ಗಲಾಟೆ ಬಳಿಕ 8 ಮಂದಿಯನ್ನು ಆಡಳಿತ ಮಂಡಳಿಯವರು ನಿರ್ಬಂಧಿಸಿದ್ದಾರೆ. ಕಾನೂನು ಕ್ರಮ ಸಹ ಕೈಗೊಳ್ಳಲಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಈ ರೀತಿ ಘಟನೆಗಳು ಮರುಕಳಿಸಬಾರದು. ನಗರದ ಯಾವುದೇ ಕಾಲೇಜಿನಲ್ಲಿ ಆಯೋಜನೆ ಆಗುವ ಕಾರ್ಯಕ್ರಮಗಳ ಕುರಿತು ಪೊಲೀಸರೊಂದಿಗೆ ಮೊದಲೇ ಚರ್ಚಿಸಬೇಕು. ಕಾಲಮಿತಿ ನಿಗದಿಪಡಿಸಬೇಕು’ ಎಂದು ಸೀಮಾಂತ್ಕುಮಾರ್ ಹೇಳಿದರು.</p>.<p>ಆವಲಹಳ್ಳಿ ವ್ಯಾಪ್ತಿಯಲ್ಲಿರುವ ನರ್ಸಿಂಗ್ ಕಾಲೇಜ್ನಲ್ಲಿ ಬುಧವಾರ ಆಯೋಜಿಸಿದ್ದ ಓಣಂ ಸಂಭ್ರಮಾಚರಣೆ ಸಂದರ್ಭದಲ್ಲಿ ತೃತೀಯ ವರ್ಷದ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿತ್ತು. ತಮಗೆ ಮಾಹಿತಿ ನೀಡದೇ ಓಣಂ ಆಯೋಜಿಸಿರುವುದನ್ನು ಹಿರಿಯ ವಿದ್ಯಾರ್ಥಿಗಳು ವಿರೋಧಿಸಿದ್ದರು. ಅಲ್ಲಿಂದ ಆರಂಭವಾದ ಹಿರಿಯ- ಕಿರಿಯ ವಿದ್ಯಾರ್ಥಿಗಳ ಗುಂಪಿನ ಗಲಾಟೆ ರಸ್ತೆಗಿಳಿದು ಬಡಿದಾಡಿಕೊಳ್ಳುವ ಹಂತಕ್ಕೆ ತಲುಪಿತ್ತು. ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿಗಳ ಬಡಿದಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಪರಸ್ಪರ ಹೊಡೆದಾಟ ನಡೆಸಿಕೊಂಡ ವಿದ್ಯಾರ್ಥಿಗಳನ್ನು ಠಾಣೆಗೆ ಕರೆಸಿ, ಎಚ್ಚರಿಕೆ ನೀಡಿ ಪೊಲೀಸರು ಕಳುಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಾಲೇಜಿನಲ್ಲಿ ಆಯೋಜಿಸುವ ಕಾರ್ಯಕ್ರಮಗಳ ಕುರಿತು ಪೊಲೀಸರಿಗೆ ಮೊದಲೇ ಮಾಹಿತಿ ನೀಡಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಸೂಚಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮೊದಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಆಡಳಿತ ಮಂಡಳಿಯವರಿಗೆ ಸೂಚಿಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಆವಲಹಳ್ಳಿಯಲ್ಲಿ ನಡೆದಿದ್ದ ಗಲಾಟೆ ಬಳಿಕ 8 ಮಂದಿಯನ್ನು ಆಡಳಿತ ಮಂಡಳಿಯವರು ನಿರ್ಬಂಧಿಸಿದ್ದಾರೆ. ಕಾನೂನು ಕ್ರಮ ಸಹ ಕೈಗೊಳ್ಳಲಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಈ ರೀತಿ ಘಟನೆಗಳು ಮರುಕಳಿಸಬಾರದು. ನಗರದ ಯಾವುದೇ ಕಾಲೇಜಿನಲ್ಲಿ ಆಯೋಜನೆ ಆಗುವ ಕಾರ್ಯಕ್ರಮಗಳ ಕುರಿತು ಪೊಲೀಸರೊಂದಿಗೆ ಮೊದಲೇ ಚರ್ಚಿಸಬೇಕು. ಕಾಲಮಿತಿ ನಿಗದಿಪಡಿಸಬೇಕು’ ಎಂದು ಸೀಮಾಂತ್ಕುಮಾರ್ ಹೇಳಿದರು.</p>.<p>ಆವಲಹಳ್ಳಿ ವ್ಯಾಪ್ತಿಯಲ್ಲಿರುವ ನರ್ಸಿಂಗ್ ಕಾಲೇಜ್ನಲ್ಲಿ ಬುಧವಾರ ಆಯೋಜಿಸಿದ್ದ ಓಣಂ ಸಂಭ್ರಮಾಚರಣೆ ಸಂದರ್ಭದಲ್ಲಿ ತೃತೀಯ ವರ್ಷದ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿತ್ತು. ತಮಗೆ ಮಾಹಿತಿ ನೀಡದೇ ಓಣಂ ಆಯೋಜಿಸಿರುವುದನ್ನು ಹಿರಿಯ ವಿದ್ಯಾರ್ಥಿಗಳು ವಿರೋಧಿಸಿದ್ದರು. ಅಲ್ಲಿಂದ ಆರಂಭವಾದ ಹಿರಿಯ- ಕಿರಿಯ ವಿದ್ಯಾರ್ಥಿಗಳ ಗುಂಪಿನ ಗಲಾಟೆ ರಸ್ತೆಗಿಳಿದು ಬಡಿದಾಡಿಕೊಳ್ಳುವ ಹಂತಕ್ಕೆ ತಲುಪಿತ್ತು. ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿಗಳ ಬಡಿದಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಪರಸ್ಪರ ಹೊಡೆದಾಟ ನಡೆಸಿಕೊಂಡ ವಿದ್ಯಾರ್ಥಿಗಳನ್ನು ಠಾಣೆಗೆ ಕರೆಸಿ, ಎಚ್ಚರಿಕೆ ನೀಡಿ ಪೊಲೀಸರು ಕಳುಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>