<p><strong>ಬೆಂಗಳೂರು: </strong>ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ನಿಧನದ ಸಲುವಾಗಿ ರಾಷ್ಟ್ರದಾದ್ಯಂತ ಒಂದು ವಾರ ಶೋಕಾಚರಣೆ ನಡೆಸಲಾಗುತ್ತಿದೆ. ಈ ಸಲುವಾಗಿ ಬಿಬಿಎಂಪಿ ಕೌನ್ಸಿಲ್ ಸಭೆ ಹಾಗೂ ಕೆಂಪೇಗೌಡ ಜಯಂತಿಯನ್ನು ಮುಂದೂಡಿದೆ. ಆದರೆ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮಾರೇನಹಳ್ಳಿ ವಾರ್ಡ್ನಲ್ಲಿ ಬುಧವಾರ ಹಮ್ಮಿಕೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಮಾತ್ರ ರದ್ದಾಗಿಲ್ಲ.</p>.<p>ಮಾರೇನಹಳ್ಳಿ ವಾರ್ಡ್ನಲ್ಲಿ ಗ್ರಂಥಾಲಯ ಕಟ್ಟಡ, ಶುದ್ಧ ಕುಡಿಯುವ ನೀರಿನ ಘಟಕ, ಪ್ರಯಾಣಿಕರ ತಂಗುದಾಣ, ಜನೌಷಧ ಕೇಂದ್ರ ಕೆ.ಜಿಎಸ್ ಕಟ್ಟಡ, ಶ್ಯಾಂಪ್ರಸಾದ್ ಮುಖರ್ಜಿ ಕ್ರೀಡಾಸಂಕೀರ್ಣ ಹಾಗೂ ಉದ್ಯಾನ ಮತ್ತು ಅನಂತ ಕುಮಾರ್ ಕ್ರೀಡಾ ಸಂಕೀರ್ಣಗಳ ಉದ್ಘಾಟನೆಯನ್ನು ಇದೇ 2ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವರು ಹಾಗೂ ವಸತಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆ ವಹಿಸುವರು ಎಂದು ಆಮಂತ್ರಣ ಪತ್ರಿಕೆ ಮುದ್ರಿಸಲಾಗಿತ್ತು.</p>.<p>ಪ್ರಣವ್ ಮುಖರ್ಜಿ ಅವರ ನಿಧನದ ಶೋಕಾಚರಣೆ ನಡುವೆಯೂ ಈ ಕಾರ್ಯಕ್ರಮ ನಡೆಯಲಿದೆ. ಈ ಕುರಿತು ವಾರ್ತಾ ಇಲಾಖೆ ಮಂಗಳವಾರ ಬಿಡುಗಡೆ ಮಾಡಿರುವ ಪ್ರಕಟಣೆಯ ಪ್ರಕಾರ, ಮುಖ್ಯಮಂತ್ರಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ವಿ.ಸೋಮಣ್ಣ ಅವರೇ ಇವುಗಳ ಉದ್ಘಾಟನೆ ನೆರವೇರಿಸಲಿದ್ದಾರೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪಶ್ಚಿಮ ವಲಯದ ಜಂಟಿ ಆಯುಕ್ತ ಚಿದಾನಂದ್, ‘ಯಾವುದೇ ಅದ್ಧೂರಿ ಕಾರ್ಯಕ್ರಮ ನಡೆಸುವುದಕ್ಕೆ ನಾವು ಅನುಮತಿ ನೀಡಿಲ್ಲ. ಬೆರಳೆಣಿಕೆ ಮಂದಿಯಷ್ಟೇ ಸೇರಿ ಕೇವಲ ರಿಬ್ಬನ್ ಕತ್ತರಿಸಲು ಅನುಮತಿ ನೀಡಿದ್ದೇವೆ’ ಎಂದರು.</p>.<p><strong>ಹೊರಾಂಗಣ ಜಾಹೀರಾತು ನಿಷೇಧ ಉಲ್ಲಂಘನೆ?</strong></p>.<p>ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊರಾಂಗಣ ಜಾಹೀರಾತುಗಳನ್ನು ನಿಷೇಧಿಸಲಾಗಿದೆ. ಆದರೆ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಂಡಿತ ದೀನದಯಾಳ್ ಉಪಾಧ್ಯಾಯ ಕಬಡ್ಡಿ ಕ್ರೀಡಾಂಗಣ, ಕನಕಗಿರಿ ಉದ್ಯಾನ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಾರಿ ಜಾಹೀರಾತುಗಳನ್ನು ಅಳವಡಿಸಲಾಗಿದೆ. ಈ ಕಾರ್ಯಕ್ರಮವು ಇದೇ 4ರಂದು ನಡೆಯಲಿದೆ.</p>.<p>‘ಪಶ್ಚಿಮ ವಲಯದ ವ್ಯಾಪ್ತಿಯಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಸಂಬಂಧಿಸಿ ಹೊರಾಂಗಣ ಜಾಹೀರಾತುಗಳ ಪ್ರದರ್ಶನಕ್ಕೆ ಬಿಬಿಎಂಪಿ ವತಿಯಿಂದ ಅನುಮತಿ ನೀಡಿಲ್ಲ’ ಎಂದು ಪಶ್ಚಿಮ ವಲಯದ ಜಂಟಿ ಆಯುಕ್ತರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ನಿಧನದ ಸಲುವಾಗಿ ರಾಷ್ಟ್ರದಾದ್ಯಂತ ಒಂದು ವಾರ ಶೋಕಾಚರಣೆ ನಡೆಸಲಾಗುತ್ತಿದೆ. ಈ ಸಲುವಾಗಿ ಬಿಬಿಎಂಪಿ ಕೌನ್ಸಿಲ್ ಸಭೆ ಹಾಗೂ ಕೆಂಪೇಗೌಡ ಜಯಂತಿಯನ್ನು ಮುಂದೂಡಿದೆ. ಆದರೆ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮಾರೇನಹಳ್ಳಿ ವಾರ್ಡ್ನಲ್ಲಿ ಬುಧವಾರ ಹಮ್ಮಿಕೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಮಾತ್ರ ರದ್ದಾಗಿಲ್ಲ.</p>.<p>ಮಾರೇನಹಳ್ಳಿ ವಾರ್ಡ್ನಲ್ಲಿ ಗ್ರಂಥಾಲಯ ಕಟ್ಟಡ, ಶುದ್ಧ ಕುಡಿಯುವ ನೀರಿನ ಘಟಕ, ಪ್ರಯಾಣಿಕರ ತಂಗುದಾಣ, ಜನೌಷಧ ಕೇಂದ್ರ ಕೆ.ಜಿಎಸ್ ಕಟ್ಟಡ, ಶ್ಯಾಂಪ್ರಸಾದ್ ಮುಖರ್ಜಿ ಕ್ರೀಡಾಸಂಕೀರ್ಣ ಹಾಗೂ ಉದ್ಯಾನ ಮತ್ತು ಅನಂತ ಕುಮಾರ್ ಕ್ರೀಡಾ ಸಂಕೀರ್ಣಗಳ ಉದ್ಘಾಟನೆಯನ್ನು ಇದೇ 2ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವರು ಹಾಗೂ ವಸತಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆ ವಹಿಸುವರು ಎಂದು ಆಮಂತ್ರಣ ಪತ್ರಿಕೆ ಮುದ್ರಿಸಲಾಗಿತ್ತು.</p>.<p>ಪ್ರಣವ್ ಮುಖರ್ಜಿ ಅವರ ನಿಧನದ ಶೋಕಾಚರಣೆ ನಡುವೆಯೂ ಈ ಕಾರ್ಯಕ್ರಮ ನಡೆಯಲಿದೆ. ಈ ಕುರಿತು ವಾರ್ತಾ ಇಲಾಖೆ ಮಂಗಳವಾರ ಬಿಡುಗಡೆ ಮಾಡಿರುವ ಪ್ರಕಟಣೆಯ ಪ್ರಕಾರ, ಮುಖ್ಯಮಂತ್ರಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ವಿ.ಸೋಮಣ್ಣ ಅವರೇ ಇವುಗಳ ಉದ್ಘಾಟನೆ ನೆರವೇರಿಸಲಿದ್ದಾರೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪಶ್ಚಿಮ ವಲಯದ ಜಂಟಿ ಆಯುಕ್ತ ಚಿದಾನಂದ್, ‘ಯಾವುದೇ ಅದ್ಧೂರಿ ಕಾರ್ಯಕ್ರಮ ನಡೆಸುವುದಕ್ಕೆ ನಾವು ಅನುಮತಿ ನೀಡಿಲ್ಲ. ಬೆರಳೆಣಿಕೆ ಮಂದಿಯಷ್ಟೇ ಸೇರಿ ಕೇವಲ ರಿಬ್ಬನ್ ಕತ್ತರಿಸಲು ಅನುಮತಿ ನೀಡಿದ್ದೇವೆ’ ಎಂದರು.</p>.<p><strong>ಹೊರಾಂಗಣ ಜಾಹೀರಾತು ನಿಷೇಧ ಉಲ್ಲಂಘನೆ?</strong></p>.<p>ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊರಾಂಗಣ ಜಾಹೀರಾತುಗಳನ್ನು ನಿಷೇಧಿಸಲಾಗಿದೆ. ಆದರೆ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಂಡಿತ ದೀನದಯಾಳ್ ಉಪಾಧ್ಯಾಯ ಕಬಡ್ಡಿ ಕ್ರೀಡಾಂಗಣ, ಕನಕಗಿರಿ ಉದ್ಯಾನ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಾರಿ ಜಾಹೀರಾತುಗಳನ್ನು ಅಳವಡಿಸಲಾಗಿದೆ. ಈ ಕಾರ್ಯಕ್ರಮವು ಇದೇ 4ರಂದು ನಡೆಯಲಿದೆ.</p>.<p>‘ಪಶ್ಚಿಮ ವಲಯದ ವ್ಯಾಪ್ತಿಯಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಸಂಬಂಧಿಸಿ ಹೊರಾಂಗಣ ಜಾಹೀರಾತುಗಳ ಪ್ರದರ್ಶನಕ್ಕೆ ಬಿಬಿಎಂಪಿ ವತಿಯಿಂದ ಅನುಮತಿ ನೀಡಿಲ್ಲ’ ಎಂದು ಪಶ್ಚಿಮ ವಲಯದ ಜಂಟಿ ಆಯುಕ್ತರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>