<p class="Briefhead"><strong>ಬೆಂಗಳೂರು:</strong> ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ನಗರದ ಅರೆಹಳ್ಳಿ ಸಮೀಪದ ಶಿಲುಬೆ ಬೆಟ್ಟದಲ್ಲಿ (ಅಣ್ಣಮ್ಮ ಬೆಟ್ಟ) ಇದೇ 29ರಂದು ನಡೆಯಬೇಕಿದ್ದ ಕ್ರಿಸ್ತನ ಪವಿತ್ರ ಜಾತ್ರೆ ಕಾರ್ಯಕ್ರಮ ರದ್ದು ಪಡಿಸಲಾಗಿದೆ.</p>.<p>‘200 ವರ್ಷಗಳ ಇತಿಹಾಸವಿರುವ ಜಾತ್ರೆಯಲ್ಲಿ ಈ ಬಾರಿಬೆಂಗಳೂರು ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಹಾಗೂ ಚೆಂಗಲ್ಪೇಟೆಯ ಧರ್ಮಾಧ್ಯಕ್ಷ ನೀತಿನಾದನ್ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ದಿವ್ಯ ಬಲಿ ಪೂಜೆ, ವಿವಿಧ ಶಿಲುಬೆ ಹಾದಿ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದೇವೆ’ ಎಂದು ಸೇಂಟ್ಆ್ಯಂಟೋನಿ ಚರ್ಚ್ನ ಧರ್ಮಗುರು ಫಾ. ಎಸ್.ಬಾರ್ತೋಲೊಮಿಯೊ ತಿಳಿಸಿದರು.</p>.<p>‘ಜಾತ್ರೆಗೆ ಹೆಚ್ಚು ಜನ ಸೇರುತ್ತಾರೆ. ಈ ಸಂದರ್ಭದಲ್ಲಿ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.ಸಾರ್ವಜನಿಕರು ಸಹಕರಿಸಬೇಕು’ ಎಂದು ಜಾತ್ರೆಯ ಸಂಘಟನಾ ಸಮಿತಿ ಸದಸ್ಯ ಎ.ಮೈಕೆಲ್ ರಾಜ್ ತಿಳಿಸಿದ್ದಾರೆ.</p>.<p><strong>ಗಾಳಿ ಆಂಜನೇಯ ಸ್ವಾಮಿ–ರಥೋತ್ಸವ ರದ್ದು</strong></p>.<p>ನಗರದ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇದೇ 28ರಿಂದ ಏಪ್ರಿಲ್ 10ರವರೆಗೆ ನಡೆಯಬೇಕಿದ್ದ ಬ್ರಹ್ಮರಥೋತ್ಸವವನ್ನು ಸರ್ಕಾರದ ಆದೇಶದ ಮೇರೆಗೆ ರದ್ದುಪಡಿಸಲಾಗಿದೆ ಎಂದು ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಟ್ರಸ್ಟ್ ತಿಳಿಸಿದೆ.</p>.<p>ಪ್ರತಿ ವರ್ಷವೂ ಬ್ರಹ್ಮರಥೋತ್ಸವದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸುತ್ತಿದ್ದರು. ಹೆಚ್ಚು ಜನ ಸೇರುವ ಕಡೆ ಕೊರೊನಾ ಸೋಂಕು ಹರಡುವ ಸಂಭವ ಇರುವುದರಿಂದ ಸರ್ಕಾರದ ಆದೇಶದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಟ್ರಸ್ಟ್ನ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead"><strong>ಬೆಂಗಳೂರು:</strong> ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ನಗರದ ಅರೆಹಳ್ಳಿ ಸಮೀಪದ ಶಿಲುಬೆ ಬೆಟ್ಟದಲ್ಲಿ (ಅಣ್ಣಮ್ಮ ಬೆಟ್ಟ) ಇದೇ 29ರಂದು ನಡೆಯಬೇಕಿದ್ದ ಕ್ರಿಸ್ತನ ಪವಿತ್ರ ಜಾತ್ರೆ ಕಾರ್ಯಕ್ರಮ ರದ್ದು ಪಡಿಸಲಾಗಿದೆ.</p>.<p>‘200 ವರ್ಷಗಳ ಇತಿಹಾಸವಿರುವ ಜಾತ್ರೆಯಲ್ಲಿ ಈ ಬಾರಿಬೆಂಗಳೂರು ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಹಾಗೂ ಚೆಂಗಲ್ಪೇಟೆಯ ಧರ್ಮಾಧ್ಯಕ್ಷ ನೀತಿನಾದನ್ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ದಿವ್ಯ ಬಲಿ ಪೂಜೆ, ವಿವಿಧ ಶಿಲುಬೆ ಹಾದಿ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದೇವೆ’ ಎಂದು ಸೇಂಟ್ಆ್ಯಂಟೋನಿ ಚರ್ಚ್ನ ಧರ್ಮಗುರು ಫಾ. ಎಸ್.ಬಾರ್ತೋಲೊಮಿಯೊ ತಿಳಿಸಿದರು.</p>.<p>‘ಜಾತ್ರೆಗೆ ಹೆಚ್ಚು ಜನ ಸೇರುತ್ತಾರೆ. ಈ ಸಂದರ್ಭದಲ್ಲಿ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.ಸಾರ್ವಜನಿಕರು ಸಹಕರಿಸಬೇಕು’ ಎಂದು ಜಾತ್ರೆಯ ಸಂಘಟನಾ ಸಮಿತಿ ಸದಸ್ಯ ಎ.ಮೈಕೆಲ್ ರಾಜ್ ತಿಳಿಸಿದ್ದಾರೆ.</p>.<p><strong>ಗಾಳಿ ಆಂಜನೇಯ ಸ್ವಾಮಿ–ರಥೋತ್ಸವ ರದ್ದು</strong></p>.<p>ನಗರದ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇದೇ 28ರಿಂದ ಏಪ್ರಿಲ್ 10ರವರೆಗೆ ನಡೆಯಬೇಕಿದ್ದ ಬ್ರಹ್ಮರಥೋತ್ಸವವನ್ನು ಸರ್ಕಾರದ ಆದೇಶದ ಮೇರೆಗೆ ರದ್ದುಪಡಿಸಲಾಗಿದೆ ಎಂದು ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಟ್ರಸ್ಟ್ ತಿಳಿಸಿದೆ.</p>.<p>ಪ್ರತಿ ವರ್ಷವೂ ಬ್ರಹ್ಮರಥೋತ್ಸವದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸುತ್ತಿದ್ದರು. ಹೆಚ್ಚು ಜನ ಸೇರುವ ಕಡೆ ಕೊರೊನಾ ಸೋಂಕು ಹರಡುವ ಸಂಭವ ಇರುವುದರಿಂದ ಸರ್ಕಾರದ ಆದೇಶದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಟ್ರಸ್ಟ್ನ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>