ಶುಕ್ರವಾರ ಇಲ್ಲಿನ ಪಕ್ಷದ ಕಚೇರಿಯಲ್ಲಿ ಸುದೀರ್ಘ ಸಭೆ ನಡೆಸಿದ ಅವರು, ‘ಪಕ್ಷವನ್ನು ಕಟ್ಟಿ, ಗಟ್ಟಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದವರಿಗೆ ಅಧಿಕಾರ ತಾನಾಗಿಯೇ ಹುಡುಕಿಕೊಂಡು ಬರುತ್ತದೆ. ನೀವು ಅಧಿಕಾರದ ಹಿಂದೆ ಹೋಗುವ ಅಗತ್ಯವೇ ಇರುವುದಿಲ್ಲ. ಪಕ್ಷದಲ್ಲಿ ಶ್ರಮಕ್ಕೆ ಮಾತ್ರ ಬೆಲೆ ಇದೆಯೇ ಹೊರತು ಪ್ರಭಾವಕ್ಕೆ ನಾನು ಮಣಿಯುವುದಿಲ್ಲ. ಎಲ್ಲರನ್ನೂಒಟ್ಟಿಗೆ ಕೆರೆದುಕೊಂಡು ಹೋಗುವ ಸಂಕಲ್ಪ ನನ್ನದು’ ಎಂದರು.