<p><strong>ಬೆಂಗಳೂರು:</strong> ಒಂದು ಬಾರಿ ಪರಿಹಾರ (ಒಟಿಎಸ್) ಯೋಜನೆ ಮುಕ್ತಾಯವಾಗಿದ್ದು, ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.</p>.<p>‘ಆಸ್ತಿ ತೆರಿಗೆ ಪಾವತಿ ಮಾಡದಿದ್ದವರಿಗೆ ಮೊದಲು ನೋಟಿಸ್ ಜಾರಿ ಮಾಡಲಾಗುತ್ತದೆ. ಆ ಅವಧಿಯಲ್ಲೂ ಪಾವತಿ ಮಾಡದಿದ್ದರೆ, ಬೀಗಮುದ್ರೆ ಹಾಕಿ ಮತ್ತೊಮ್ಮೆ ಗಡುವು ನೀಡಲಾಗುತ್ತದೆ. ಅದನ್ನೂ ಮೀರಿದರೆ ಆಸ್ತಿ ಮುಟ್ಟುಗೋಲು, ಹರಾಜು ಹಾಕಲು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಸುದ್ದಿಗಾರರಿಗೆ ಸೋಮವಾರ ಮಾಹಿತಿ ನೀಡಿದರು.</p>.<p>ಒಟಿಎಸ್ ಯೋಜನೆಯ ಕೊನೆಯ ವಾರದಲ್ಲಿ ಸುಮಾರು ₹400 ಕೋಟಿ ತೆರಿಗೆ ಸಂಗ್ರಹವಾಗಿದೆ. ಮುಂದಿನ ತಿಂಗಳಲ್ಲಿ ಆರ್ಥಿಕ ವರ್ಷದ ಗುರಿ ₹5,210 ಕೋಟಿಯನ್ನು ಸಾಧಿಸಲು ಪ್ರಯತ್ನಿಸಲಾಗುತ್ತದೆ ಎಂದರು.</p>.<p>ಫೆಂಜಲ್ ಚಂಡಮಾರುತದ ಪರಿಣಾಮ ನಗರದಲ್ಲಿ ಮಳೆಯಾಗುತ್ತಿದ್ದು, ರಸ್ತೆ ಗುಂಡಿಗಳನ್ನು ಮುಚ್ಚಲು ಸಮಸ್ಯೆಯಾಗುತ್ತಿದೆ. ಮಳೆ ನಿಂತ ಕೂಡಲೆ, ‘ಹಾಟ್ ಮಿಕ್ಸ್ ಪ್ಲಾಂಟ್’ನಿಂದ ಹೆಚ್ಚು ಡಾಂಬರನ್ನು ಪಡೆದು ಶೀಘ್ರಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚಸಲಾಗಿದೆ ಎಂದು ಹೇಳಿದರು.</p>.<p>ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸತೀಶ್, ಅರ್ಚನಾ, ರಮೇಶ್, ಗಿರೀಶ್, ಕರೀಗೌಡ, ರಮ್ಯಾ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.</p>.<h2>ಇ–ಖಾತಾಗೆ ಹೆಚ್ಚುವರಿ ಎಆರ್ಒ</h2><p>ಬಿಬಿಎಂಪಿ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೆ ಒಂದು ವಾರದಲ್ಲಿ ಇ–ಖಾತಾಗಳನ್ನು ವಿತರಿಸುವ ಉದ್ದೇಶದಿಂದ ಹೆಚ್ಚು ಸಹಾಯಕ ಕಂದಾಯ ಅಧಿಕಾರಿಗಳನ್ನು (ಎಆರ್ಒ) ನಿಯೋಜಿಸಿ ಕೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ವಲಯ ಆಯುಕ್ತರಿಗೆ ಸೂಚಿಸಿದ್ದಾರೆ.</p><p>ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಎಆರ್ಒಗಳ ಲಾಗಿನ್ನಲ್ಲಿ ಬಾಕಿಯಿರುವ ಇ-ಖಾತಾ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ವಲಯವಾರು ಹೆಚ್ಚುವರಿ ಎಆರ್ಒಗಳನ್ನು ನಿಯೋಜಿಸಿಕೊಳ್ಳಬೇಕು’ ಎಂದರು.</p><p>ಇ-ಖಾತಾ ವೆಬ್ಸೈಟ್ಗೆ 72.96 ಲಕ್ಷ ಹಿಟ್ಗಳು ಬಂದಿದ್ದು, 6 ಲಕ್ಷ ಕರಡು ಇ-ಖಾತಾ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದುವರೆಗೆ 21,369 ಅಂತಿಮ ಇ-ಖಾತಾ ನೀಡಲಾಗಿದ್ದು, ಎಆರ್ಒಗಳ ಲಾಗಿನ್ನಲ್ಲಿ ಸುಮಾರು 14 ಸಾವಿರ ಅರ್ಜಿಗಳು ಬಾಕಿ ಇವೆ. ಅವುಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಒಂದು ಬಾರಿ ಪರಿಹಾರ (ಒಟಿಎಸ್) ಯೋಜನೆ ಮುಕ್ತಾಯವಾಗಿದ್ದು, ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.</p>.<p>‘ಆಸ್ತಿ ತೆರಿಗೆ ಪಾವತಿ ಮಾಡದಿದ್ದವರಿಗೆ ಮೊದಲು ನೋಟಿಸ್ ಜಾರಿ ಮಾಡಲಾಗುತ್ತದೆ. ಆ ಅವಧಿಯಲ್ಲೂ ಪಾವತಿ ಮಾಡದಿದ್ದರೆ, ಬೀಗಮುದ್ರೆ ಹಾಕಿ ಮತ್ತೊಮ್ಮೆ ಗಡುವು ನೀಡಲಾಗುತ್ತದೆ. ಅದನ್ನೂ ಮೀರಿದರೆ ಆಸ್ತಿ ಮುಟ್ಟುಗೋಲು, ಹರಾಜು ಹಾಕಲು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಸುದ್ದಿಗಾರರಿಗೆ ಸೋಮವಾರ ಮಾಹಿತಿ ನೀಡಿದರು.</p>.<p>ಒಟಿಎಸ್ ಯೋಜನೆಯ ಕೊನೆಯ ವಾರದಲ್ಲಿ ಸುಮಾರು ₹400 ಕೋಟಿ ತೆರಿಗೆ ಸಂಗ್ರಹವಾಗಿದೆ. ಮುಂದಿನ ತಿಂಗಳಲ್ಲಿ ಆರ್ಥಿಕ ವರ್ಷದ ಗುರಿ ₹5,210 ಕೋಟಿಯನ್ನು ಸಾಧಿಸಲು ಪ್ರಯತ್ನಿಸಲಾಗುತ್ತದೆ ಎಂದರು.</p>.<p>ಫೆಂಜಲ್ ಚಂಡಮಾರುತದ ಪರಿಣಾಮ ನಗರದಲ್ಲಿ ಮಳೆಯಾಗುತ್ತಿದ್ದು, ರಸ್ತೆ ಗುಂಡಿಗಳನ್ನು ಮುಚ್ಚಲು ಸಮಸ್ಯೆಯಾಗುತ್ತಿದೆ. ಮಳೆ ನಿಂತ ಕೂಡಲೆ, ‘ಹಾಟ್ ಮಿಕ್ಸ್ ಪ್ಲಾಂಟ್’ನಿಂದ ಹೆಚ್ಚು ಡಾಂಬರನ್ನು ಪಡೆದು ಶೀಘ್ರಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚಸಲಾಗಿದೆ ಎಂದು ಹೇಳಿದರು.</p>.<p>ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸತೀಶ್, ಅರ್ಚನಾ, ರಮೇಶ್, ಗಿರೀಶ್, ಕರೀಗೌಡ, ರಮ್ಯಾ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.</p>.<h2>ಇ–ಖಾತಾಗೆ ಹೆಚ್ಚುವರಿ ಎಆರ್ಒ</h2><p>ಬಿಬಿಎಂಪಿ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೆ ಒಂದು ವಾರದಲ್ಲಿ ಇ–ಖಾತಾಗಳನ್ನು ವಿತರಿಸುವ ಉದ್ದೇಶದಿಂದ ಹೆಚ್ಚು ಸಹಾಯಕ ಕಂದಾಯ ಅಧಿಕಾರಿಗಳನ್ನು (ಎಆರ್ಒ) ನಿಯೋಜಿಸಿ ಕೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ವಲಯ ಆಯುಕ್ತರಿಗೆ ಸೂಚಿಸಿದ್ದಾರೆ.</p><p>ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಎಆರ್ಒಗಳ ಲಾಗಿನ್ನಲ್ಲಿ ಬಾಕಿಯಿರುವ ಇ-ಖಾತಾ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ವಲಯವಾರು ಹೆಚ್ಚುವರಿ ಎಆರ್ಒಗಳನ್ನು ನಿಯೋಜಿಸಿಕೊಳ್ಳಬೇಕು’ ಎಂದರು.</p><p>ಇ-ಖಾತಾ ವೆಬ್ಸೈಟ್ಗೆ 72.96 ಲಕ್ಷ ಹಿಟ್ಗಳು ಬಂದಿದ್ದು, 6 ಲಕ್ಷ ಕರಡು ಇ-ಖಾತಾ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದುವರೆಗೆ 21,369 ಅಂತಿಮ ಇ-ಖಾತಾ ನೀಡಲಾಗಿದ್ದು, ಎಆರ್ಒಗಳ ಲಾಗಿನ್ನಲ್ಲಿ ಸುಮಾರು 14 ಸಾವಿರ ಅರ್ಜಿಗಳು ಬಾಕಿ ಇವೆ. ಅವುಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>