‘ಮುಖ್ಯ ಆಯುಕ್ತರ ನಿರ್ದೇಶನದಂತೆ ಖಾತಾ ಮೇಳ ಮಾಡಿ 21 ಸಾವಿರ ಹೊಸ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಜೋಡಣೆ ಮಾಡಿಕೊಳ್ಳಲಾಗಿದೆ. ಮಹದೇವಪುರ, ಬೊಮ್ಮನಹಳ್ಳಿ, ಯಲಹಂಕ ವಲಯದಲ್ಲಿ ಇನ್ನೂ ಹೆಚ್ಚಿನ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಬರಬೇಕಿದೆ. ವಿಶೇಷ ಖಾತಾ ಮೇಳದ ಮೂಲಕ 1 ಲಕ್ಷದಷ್ಟು ಹೊಸ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಸೂಚನೆ ನೀಡಲಾಗಿದೆ’ ಎಂದು ಅವರು ಹೇಳಿದರು.