<p><strong>ಬೆಂಗಳೂರು</strong>: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಿಸಲು ಬಾಕಿ ಉಳಿಸಿಕೊಂಡ ಎಲ್ಲರಿಗೂ ನೋಟಿಸ್ ಜಾರಿ ಮಾಡಿ, ವಸೂಲಿ ಮಾಡಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.</p>.<p>ಆಸ್ತಿ ತೆರಿಗೆ ಸಂಗ್ರಹದ ಬಗ್ಗೆ ಶುಕ್ರವಾರ ನಡೆದ ವರ್ಚ್ಯುಯಲ್ ಸಭೆಯಲ್ಲಿ ವಲಯವಾರು ಮಾಹಿತಿ ಪಡೆದರು.</p>.<p>ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹಿಸಲು ಗಮನಹರಿಸಬೇಕು. ವಾರ್ಡ್ ವ್ಯಾಪ್ತಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಗೆ ನೋಟಿಸ್ ನೀಡಬೇಕು ಎಂದರು.</p>.<p>ಶಿಕ್ಷಣ ಸಂಸ್ಥೆಗಳು, ಕ್ಲಬ್ಗಳು, ಮಾಲ್ಗಳಿಂದ ಆಸ್ತಿ ತೆರಿಗೆ ಸಂಗ್ರಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕಂದಾಯ ಅಧಿಕಾರಿಗಳು ಪ್ರಯತ್ನಿಸಬೇಕು ಎಂದರು.</p>.<p>ಬೆಸ್ಕಾಂ ದತ್ತಾಂಶದ ಆಧಾರ ಸ್ವತ್ತುಗಳನ್ನು ಪರಿಶೀಲಿಸಲಾಗುತ್ತಿದ್ದು, ಆಸ್ತಿತೆರಿಗೆಯಲ್ಲಿ ವ್ಯತ್ಯಾಸ ಕಂಡುಬಂದಂತಹ ಸ್ವತ್ತುಗಳಿಗೆ ನೋಟಿಸ್ ಜಾರಿಗೊಳಿಸಿ ವ್ಯತ್ಯಾಸದ ತೆರಿಗೆಯನ್ನು ದಂಡ ಹಾಗೂ ಬಡ್ಡಿಯೊಂದಿಗೆ ಸಂಗ್ರಹಿಸಬೇಕು. ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರ್ಪಡೆಯಾಗದ ಸ್ವಾಧೀನಾನುಭವ ಪತ್ರ ಪಡೆದಿರುವ ಆಸ್ತಿಗಳನ್ನು ಗುರುತಿಸಿ ತೆರಿಗೆ ಸಂಗ್ರಹಿಸಬೇಕು ಎಂದರು.</p>.<p>ಎಲ್ಲ 8 ವಲಯಗಳ ಕಂದಾಯ ಅಧಿಕಾರಿ ಹಾಗೂ ಸಹಾಯ ಕಂದಾಯ ಅಧಿಕಾರಿಗಳಿಗೆ ವಾರದ ಗುರಿ ನೀಡಲಾಗಿದೆ. ಪ್ರತಿ ವಾರವೂ ಆಸ್ತಿ ತೆರಿಗೆ ಸಂಗ್ರಹಿಸಿರುವ ಬಗ್ಗೆ ಪರಿಶೀಲನಾ ಸಭೆ ನಡೆಸಬೇಕೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು.</p>.<p><strong>₹2,718 ಕೋಟಿ ಸಂಗ್ರಹ:</strong> 2022–23ನೇ ಸಾಲಿನಲ್ಲಿ ₹ 4,189.78 ಕೋಟಿ ಆಸ್ತಿತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಡಿ.28ರವರೆಗೆ ₹2,718.22 ಕೋಟಿ ಕೋಟಿ ಸಂಗ್ರಹವಾಗಿದೆ. ಇನ್ನೂ ₹1,471.56 ಕೋಟಿ ಸಂಗ್ರಹಿಸಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಿಸಲು ಬಾಕಿ ಉಳಿಸಿಕೊಂಡ ಎಲ್ಲರಿಗೂ ನೋಟಿಸ್ ಜಾರಿ ಮಾಡಿ, ವಸೂಲಿ ಮಾಡಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.</p>.<p>ಆಸ್ತಿ ತೆರಿಗೆ ಸಂಗ್ರಹದ ಬಗ್ಗೆ ಶುಕ್ರವಾರ ನಡೆದ ವರ್ಚ್ಯುಯಲ್ ಸಭೆಯಲ್ಲಿ ವಲಯವಾರು ಮಾಹಿತಿ ಪಡೆದರು.</p>.<p>ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹಿಸಲು ಗಮನಹರಿಸಬೇಕು. ವಾರ್ಡ್ ವ್ಯಾಪ್ತಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಗೆ ನೋಟಿಸ್ ನೀಡಬೇಕು ಎಂದರು.</p>.<p>ಶಿಕ್ಷಣ ಸಂಸ್ಥೆಗಳು, ಕ್ಲಬ್ಗಳು, ಮಾಲ್ಗಳಿಂದ ಆಸ್ತಿ ತೆರಿಗೆ ಸಂಗ್ರಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕಂದಾಯ ಅಧಿಕಾರಿಗಳು ಪ್ರಯತ್ನಿಸಬೇಕು ಎಂದರು.</p>.<p>ಬೆಸ್ಕಾಂ ದತ್ತಾಂಶದ ಆಧಾರ ಸ್ವತ್ತುಗಳನ್ನು ಪರಿಶೀಲಿಸಲಾಗುತ್ತಿದ್ದು, ಆಸ್ತಿತೆರಿಗೆಯಲ್ಲಿ ವ್ಯತ್ಯಾಸ ಕಂಡುಬಂದಂತಹ ಸ್ವತ್ತುಗಳಿಗೆ ನೋಟಿಸ್ ಜಾರಿಗೊಳಿಸಿ ವ್ಯತ್ಯಾಸದ ತೆರಿಗೆಯನ್ನು ದಂಡ ಹಾಗೂ ಬಡ್ಡಿಯೊಂದಿಗೆ ಸಂಗ್ರಹಿಸಬೇಕು. ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರ್ಪಡೆಯಾಗದ ಸ್ವಾಧೀನಾನುಭವ ಪತ್ರ ಪಡೆದಿರುವ ಆಸ್ತಿಗಳನ್ನು ಗುರುತಿಸಿ ತೆರಿಗೆ ಸಂಗ್ರಹಿಸಬೇಕು ಎಂದರು.</p>.<p>ಎಲ್ಲ 8 ವಲಯಗಳ ಕಂದಾಯ ಅಧಿಕಾರಿ ಹಾಗೂ ಸಹಾಯ ಕಂದಾಯ ಅಧಿಕಾರಿಗಳಿಗೆ ವಾರದ ಗುರಿ ನೀಡಲಾಗಿದೆ. ಪ್ರತಿ ವಾರವೂ ಆಸ್ತಿ ತೆರಿಗೆ ಸಂಗ್ರಹಿಸಿರುವ ಬಗ್ಗೆ ಪರಿಶೀಲನಾ ಸಭೆ ನಡೆಸಬೇಕೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು.</p>.<p><strong>₹2,718 ಕೋಟಿ ಸಂಗ್ರಹ:</strong> 2022–23ನೇ ಸಾಲಿನಲ್ಲಿ ₹ 4,189.78 ಕೋಟಿ ಆಸ್ತಿತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಡಿ.28ರವರೆಗೆ ₹2,718.22 ಕೋಟಿ ಕೋಟಿ ಸಂಗ್ರಹವಾಗಿದೆ. ಇನ್ನೂ ₹1,471.56 ಕೋಟಿ ಸಂಗ್ರಹಿಸಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>