<p><strong>ಬೆಂಗಳೂರು</strong>: ಬಿಬಿಎಂಪಿಯು ಮಹಾನಗರ ವ್ಯಾಪ್ತಿಯ ಆಸ್ತಿಗಳ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೋಟಿಸ್ ನೀಡಿ ಭಾರಿ ದಂಡ ವಸೂಲಿ ಮಾಡಲು ಮುಂದಾಗಿರುವ ಕ್ರಮವನ್ನು ಭಾರತ ಕಮ್ಯೂನಿಸ್ಟ್ ಪಕ್ಷದ (ಮಾರ್ಕ್ಸ್ ವಾದಿ) ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲಾ ಸಮಿತಿಗಳು ತೀವ್ರವಾಗಿ ಖಂಡಿಸಿವೆ.</p>.<p>‘2016 –17 ರ ವಲಯ ಪುನರ್ ವಿಂಗಡಣೆ ಆಧಾರಿತ ಆಸ್ತಿ ತೆರಿಗೆ ಪರಿಷ್ಕರಣೆ ಕುರಿತು ಆಸ್ತಿ ಮಾಲೀಕರಿಗೆ ಪಾಲಿಕೆ ಅಗತ್ಯ ನೋಟಿಸ್ ನೀಡಿಲ್ಲ. ಆದರೆ, ಅವರಿಂದ ಹಿಂದಿನ ದರದಲ್ಲೇ ತೆರಿಗೆ ಜಮಾ ಮಾಡಿಕೊಂಡು 5 ವರ್ಷಗಳ ನಂತರ ಇದೀಗ ವ್ಯತ್ಯಾಸದ ತೆರಿಗೆ ಮೊತ್ತವನ್ನು ಬಾಕಿ ಎಂದು ಪರಿಗಣಿಸಿ ದುಬಾರಿ ದಂಡ ವಸೂಲಿ ಮಾಡುತ್ತಿರುವುದು ಅಕ್ಷಮ್ಯ’ ಎಂದು ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಎನ್. ಉಮೇಶ್ ಖಂಡಿಸಿದ್ದಾರೆ.</p>.<p>‘ವಲಯ ಪುನರ್ ವಿಂಗಡಣೆ ಕುರಿತು ಮತ್ತು ಅದಕ್ಕೆ ಸಂಬಂಧಿಸಿದ ಪರೋಕ್ಷ ತೆರಿಗೆ ಹೆಚ್ಚಳ ಕುರಿತು ಈ ಹಿಂದೆಯೇ ಜನತೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅದ್ಯಾವುದನ್ನೂ ಲೆಕ್ಕಿಸದೆ ವಲಯ ಪುನರ್ ವಿಂಗಡಣೆ ಮತ್ತು ಸಂಬಂಧಿತ ತೆರಿಗೆ ಹೆಚ್ಚಳಕ್ಕೆ ಮುಂದಾಗಿದ್ದ ಬಿಬಿಎಂಪಿಯು ತೆರಿಗೆ ಪಾವತಿ ವೇಳೆಯಲ್ಲಿಯೇ ಸಂಬಂಧಿತ ವ್ಯತ್ಯಾಸದ ಮೊತ್ತ ಕುರಿತು ಅಗತ್ಯ ತಿಳಿವಳಿಕೆ ನೀಡಬೇಕಿತ್ತು’ ಎಂದು ಅವರು ಹೇಳಿದ್ದಾರೆ.</p>.<p class="Subhead"><strong>ಅಧಿಕಾರಿಗಳೇ ಹೊಣೆ:</strong>‘ಸಂಕಷ್ಟದ ಸಂದರ್ಭದಲ್ಲಿ ಜನರ ಮೇಲೆ ತೆರಿಗೆಯಲ್ಲದೆ ದಂಡದ ಹೊರೆ ಹೊರಿಸುವುದು ಸರಿಯಲ್ಲ. ಸಾರ್ವಜನಿಕರಿಗೆ ಅಧಿಕಾರಿಗಳೇ ಈ ಬಗ್ಗೆ ಮಾಹಿತಿ ನೀಡಬೇಕಿತ್ತು. ಇದು ಅಧಿಕಾರಿಗಳಿಂದ ಆಗಿರುವ ಪ್ರಮಾದ. ಅವರ ನಿರ್ಲಕ್ಷ್ಯವನ್ನು ಮರೆಮಾಚಿ, ಸಾರ್ವಜನಿಕರೇ ತೆರಿಗೆ ಪಾವತಿಸಿಲ್ಲ ಎಂದು ಹೇಳಲಾಗುತ್ತಿದೆ’ ಎಂದು ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ಹೇಳಿದ್ದಾರೆ.</p>.<p>‘ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು. ಕೋವಿಡ್ ಬಿಕ್ಕಟ್ಟು ಪರಿಹಾರವಾದ ನಂತರ, ಮುಂದಿನ ವರ್ಷ ಪರಿಷ್ಕೃತ ತೆರಿಗೆ ವ್ಯವಸ್ಥೆ ಜಾರಿ ಮಾಡಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಬಿಎಂಪಿಯು ಮಹಾನಗರ ವ್ಯಾಪ್ತಿಯ ಆಸ್ತಿಗಳ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೋಟಿಸ್ ನೀಡಿ ಭಾರಿ ದಂಡ ವಸೂಲಿ ಮಾಡಲು ಮುಂದಾಗಿರುವ ಕ್ರಮವನ್ನು ಭಾರತ ಕಮ್ಯೂನಿಸ್ಟ್ ಪಕ್ಷದ (ಮಾರ್ಕ್ಸ್ ವಾದಿ) ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲಾ ಸಮಿತಿಗಳು ತೀವ್ರವಾಗಿ ಖಂಡಿಸಿವೆ.</p>.<p>‘2016 –17 ರ ವಲಯ ಪುನರ್ ವಿಂಗಡಣೆ ಆಧಾರಿತ ಆಸ್ತಿ ತೆರಿಗೆ ಪರಿಷ್ಕರಣೆ ಕುರಿತು ಆಸ್ತಿ ಮಾಲೀಕರಿಗೆ ಪಾಲಿಕೆ ಅಗತ್ಯ ನೋಟಿಸ್ ನೀಡಿಲ್ಲ. ಆದರೆ, ಅವರಿಂದ ಹಿಂದಿನ ದರದಲ್ಲೇ ತೆರಿಗೆ ಜಮಾ ಮಾಡಿಕೊಂಡು 5 ವರ್ಷಗಳ ನಂತರ ಇದೀಗ ವ್ಯತ್ಯಾಸದ ತೆರಿಗೆ ಮೊತ್ತವನ್ನು ಬಾಕಿ ಎಂದು ಪರಿಗಣಿಸಿ ದುಬಾರಿ ದಂಡ ವಸೂಲಿ ಮಾಡುತ್ತಿರುವುದು ಅಕ್ಷಮ್ಯ’ ಎಂದು ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಎನ್. ಉಮೇಶ್ ಖಂಡಿಸಿದ್ದಾರೆ.</p>.<p>‘ವಲಯ ಪುನರ್ ವಿಂಗಡಣೆ ಕುರಿತು ಮತ್ತು ಅದಕ್ಕೆ ಸಂಬಂಧಿಸಿದ ಪರೋಕ್ಷ ತೆರಿಗೆ ಹೆಚ್ಚಳ ಕುರಿತು ಈ ಹಿಂದೆಯೇ ಜನತೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅದ್ಯಾವುದನ್ನೂ ಲೆಕ್ಕಿಸದೆ ವಲಯ ಪುನರ್ ವಿಂಗಡಣೆ ಮತ್ತು ಸಂಬಂಧಿತ ತೆರಿಗೆ ಹೆಚ್ಚಳಕ್ಕೆ ಮುಂದಾಗಿದ್ದ ಬಿಬಿಎಂಪಿಯು ತೆರಿಗೆ ಪಾವತಿ ವೇಳೆಯಲ್ಲಿಯೇ ಸಂಬಂಧಿತ ವ್ಯತ್ಯಾಸದ ಮೊತ್ತ ಕುರಿತು ಅಗತ್ಯ ತಿಳಿವಳಿಕೆ ನೀಡಬೇಕಿತ್ತು’ ಎಂದು ಅವರು ಹೇಳಿದ್ದಾರೆ.</p>.<p class="Subhead"><strong>ಅಧಿಕಾರಿಗಳೇ ಹೊಣೆ:</strong>‘ಸಂಕಷ್ಟದ ಸಂದರ್ಭದಲ್ಲಿ ಜನರ ಮೇಲೆ ತೆರಿಗೆಯಲ್ಲದೆ ದಂಡದ ಹೊರೆ ಹೊರಿಸುವುದು ಸರಿಯಲ್ಲ. ಸಾರ್ವಜನಿಕರಿಗೆ ಅಧಿಕಾರಿಗಳೇ ಈ ಬಗ್ಗೆ ಮಾಹಿತಿ ನೀಡಬೇಕಿತ್ತು. ಇದು ಅಧಿಕಾರಿಗಳಿಂದ ಆಗಿರುವ ಪ್ರಮಾದ. ಅವರ ನಿರ್ಲಕ್ಷ್ಯವನ್ನು ಮರೆಮಾಚಿ, ಸಾರ್ವಜನಿಕರೇ ತೆರಿಗೆ ಪಾವತಿಸಿಲ್ಲ ಎಂದು ಹೇಳಲಾಗುತ್ತಿದೆ’ ಎಂದು ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ಹೇಳಿದ್ದಾರೆ.</p>.<p>‘ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು. ಕೋವಿಡ್ ಬಿಕ್ಕಟ್ಟು ಪರಿಹಾರವಾದ ನಂತರ, ಮುಂದಿನ ವರ್ಷ ಪರಿಷ್ಕೃತ ತೆರಿಗೆ ವ್ಯವಸ್ಥೆ ಜಾರಿ ಮಾಡಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>