<p><strong>ಬೆಂಗಳೂರು:</strong> ಇಂದಿರಾನಗರದ 100 ಅಡಿ ರಸ್ತೆಯಲ್ಲಿ ವಾಣಿಜ್ಯ ಕಟ್ಟಡಗಳ ಆಸ್ತಿ ತೆರಿಗೆ ಪಾವತಿಯ ಮರುಪರಿಶೀಲನೆ ಹಾಗೂ ಪರಿಷ್ಕರಣೆಯ ಸರ್ವೆ ನಡೆಸಲಾಗಿದೆ. ವ್ಯತ್ಯಾಸ ಕಂಡುಬಂದ ಸ್ವತ್ತುಗಳಿಗೆ ನೋಟಿಸ್ ನೀಡಲಾಗಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.</p>.<p>ಹಲವು ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು. </p>.<p>ಕೇಂದ್ರ ನಗರ ಪಾಲಿಕೆಯ ಎಲ್ಲ ಕಂದಾಯ ವಿಭಾಗಗಳ 9 ಕಂದಾಯ ಅಧಿಕಾರಿಗಳ ತಂಡದಿಂದ 120ಕ್ಕೂ ಹೆಚ್ಚು ಸಿಬ್ಬಂದಿ 197 ಸ್ವತ್ತುಗಳ ಕಂದಾಯ ಪರಿಶೀಲನೆ ನಡೆಸಿದ್ದು, 147 ಸ್ವತ್ತುಗಳ ತೆರಿಗೆ ಸರಿಯಾಗಿದೆ. 49 ಕಟ್ಟಡಗಳ ಆಸ್ತಿ ತೆರಿಗೆಯಲ್ಲಿ ವ್ಯತ್ಯಾಸ ಕಂಡು ಬಂದಿದೆ. ಹೀಗಾಗಿ ಆ ಕಟ್ಟಡಗಳ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಹೇಳಿದರು.</p>.<p>ಜೀವನ್ಬಿಮಾ ನಗರ ಕಂದಾಯ ವಿಭಾಗ ಹಾಗೂ ದೊಮ್ಮಲೂರಿನ ಕಂದಾಯ ವಿಭಾಗಗಳ ಸ್ವತ್ತುಗಳ ಕಂದಾಯ ಪಾವತಿಯ ಮರುಪರಿಶೀಲನೆ ಮಾಡಿದಾಗ ₹7.21 ಕೋಟಿ ವ್ಯತ್ಯಾಸ ಕಂಡು ಬಂದಿದೆ. 15 ದಿನಗಳ ಕಾಲಾವಧಿಯಲ್ಲಿ ಸ್ವತ್ತಿನ ಮಾಲೀಕರು ಹಿಂಬರಹ ನೀಡಬೇಕು. ಆಕ್ಷೇಪಣೆಗಳು ಇಲ್ಲದಿದ್ದರೆ ಬೇಡಿಕೆ ನೋಟಿಸ್ ನೀಡಿ ಬಾಕಿ ತೆರಿಗೆಯನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇಂದಿರಾನಗರದ 100 ಅಡಿ ರಸ್ತೆಯಲ್ಲಿ ವಾಣಿಜ್ಯ ಕಟ್ಟಡಗಳ ಆಸ್ತಿ ತೆರಿಗೆ ಪಾವತಿಯ ಮರುಪರಿಶೀಲನೆ ಹಾಗೂ ಪರಿಷ್ಕರಣೆಯ ಸರ್ವೆ ನಡೆಸಲಾಗಿದೆ. ವ್ಯತ್ಯಾಸ ಕಂಡುಬಂದ ಸ್ವತ್ತುಗಳಿಗೆ ನೋಟಿಸ್ ನೀಡಲಾಗಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.</p>.<p>ಹಲವು ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು. </p>.<p>ಕೇಂದ್ರ ನಗರ ಪಾಲಿಕೆಯ ಎಲ್ಲ ಕಂದಾಯ ವಿಭಾಗಗಳ 9 ಕಂದಾಯ ಅಧಿಕಾರಿಗಳ ತಂಡದಿಂದ 120ಕ್ಕೂ ಹೆಚ್ಚು ಸಿಬ್ಬಂದಿ 197 ಸ್ವತ್ತುಗಳ ಕಂದಾಯ ಪರಿಶೀಲನೆ ನಡೆಸಿದ್ದು, 147 ಸ್ವತ್ತುಗಳ ತೆರಿಗೆ ಸರಿಯಾಗಿದೆ. 49 ಕಟ್ಟಡಗಳ ಆಸ್ತಿ ತೆರಿಗೆಯಲ್ಲಿ ವ್ಯತ್ಯಾಸ ಕಂಡು ಬಂದಿದೆ. ಹೀಗಾಗಿ ಆ ಕಟ್ಟಡಗಳ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಹೇಳಿದರು.</p>.<p>ಜೀವನ್ಬಿಮಾ ನಗರ ಕಂದಾಯ ವಿಭಾಗ ಹಾಗೂ ದೊಮ್ಮಲೂರಿನ ಕಂದಾಯ ವಿಭಾಗಗಳ ಸ್ವತ್ತುಗಳ ಕಂದಾಯ ಪಾವತಿಯ ಮರುಪರಿಶೀಲನೆ ಮಾಡಿದಾಗ ₹7.21 ಕೋಟಿ ವ್ಯತ್ಯಾಸ ಕಂಡು ಬಂದಿದೆ. 15 ದಿನಗಳ ಕಾಲಾವಧಿಯಲ್ಲಿ ಸ್ವತ್ತಿನ ಮಾಲೀಕರು ಹಿಂಬರಹ ನೀಡಬೇಕು. ಆಕ್ಷೇಪಣೆಗಳು ಇಲ್ಲದಿದ್ದರೆ ಬೇಡಿಕೆ ನೋಟಿಸ್ ನೀಡಿ ಬಾಕಿ ತೆರಿಗೆಯನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>