ಅನುಮತಿ ಸಿಕ್ಕ ತಕ್ಷಣ ಆದೇಶ: ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡದಿರುವ ಕುರಿತು ಬಿಜೆಪಿಯ ಬಿ.ವೈ. ವಿಜಯೇಂದ್ರ ಮತ್ತು ಮಹೇಶ್ ಟೆಂಗಿನಕಾಯಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಮಧು, ‘ನ್ಯಾಯಾಲಯದ ನಿರ್ಬಂಧ ಇರುವುದರಿಂದ ನೇಮಕಾತಿ ಆದೇಶ ನೀಡಿಲ್ಲ. ನ್ಯಾಯಾಲಯ ಒಪ್ಪಿಗೆ ನೀಡಿದ ತಕ್ಷಣವೇ ನೇಮಕಾತಿ ಆದೇಶ ನೀಡುತ್ತೇವೆ’ ಎಂದರು.