<p><strong>ಬೆಂಗಳೂರು</strong>: ‘ಕರ್ನಾಟಕ ಪಬ್ಲಿಕ್ ಶಾಲೆಗಳನ್ನು(ಕೆಪಿಎಸ್) ಪರಿಚಯಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳ ‘ಮುಚ್ಚುವಿಕೆ’ ಕ್ರಮದ ವಿರುದ್ಧ ಚಳವಳಿ ಸಂಘಟಿಸಬೇಕಿದೆ’ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ಕರೆ ನೀಡಿದರು.</p>.<p>ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ಬೆಂಗಳೂರು ಜಿಲ್ಲಾ ಮಂಡಳಿಯು ನಗರದಲ್ಲಿ ಶನಿವಾರ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಶಾಲೆಗಳನ್ನು ಮುಚ್ಚುವುದು ಎಂದರೆ ಸಂವಿಧಾನದ ಬಾಗಿಲುಗಳನ್ನು ಮುಚ್ಚಿದಂತೆ. ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪರಿಚಯಿಸುವ ಮೊದಲು ರಾಜ್ಯ ಸರ್ಕಾರವು ಪಾಲುದಾರರೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ’ ಎಂದು ಆರೋಪಿಸಿದರು.</p>.<p>‘ಕರ್ನಾಟಕ ಪಬ್ಲಿಕ್ ಶಾಲೆಗಳು, ಸಕಾರಾತ್ಮಕ ಬದಲಾವಣೆಗಳನ್ನು ತಂದಿವೆಯೇ ಎಂಬುದನ್ನು ನಿರ್ಣಯಿಸಲು ಸಮಗ್ರ ಅಧ್ಯಯನ ನಡೆದಿತ್ತೇ’ ಎಂದು ಪ್ರಶ್ನಿಸಿದರು.</p>.<p>‘ಸಚಿವ ಮಧು ಬಂಗಾರಪ್ಪ ಅವರು ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದರು. ಆದರೆ, ಏಳು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಆದೇಶವನ್ನು ಯಾವ ಕಾರಣಕ್ಕೆ ಹೊರಡಿಸಲಾಗಿದೆ’ ಎಂದು ಪ್ರಶ್ನಿಸಿದರು.</p>.<p>‘ಅನುದಾನ ಕಡಿಮೆ ಮಾಡುವುದು, ಸಾರ್ವಜನಿಕ ಸಂಸ್ಥೆಗಳನ್ನು ದುರ್ಬಲಗೊಳಿಸುವ ತಂತ್ರವನ್ನು ಸರ್ಕಾರ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>ಶಿಕ್ಷಣ ತಜ್ಞ ಶ್ರೀಪಾದ್ ಭಟ್ ಮಾತನಾಡಿ, ‘ಸರ್ಕಾರಿ ಶಾಲೆಗಳ ಮುಚ್ಚುವಿಕೆಯ ವಿರುದ್ಧ ಶಿಕ್ಷಣ ಸಚಿವರು ವಿದ್ಯಾರ್ಥಿ ಸಂಘಟನೆಗಳ ಜತೆಗೆ ಸಭೆ ನಡೆಸಬೇಕು. ಶಿಕ್ಷಣ ವ್ಯವಸ್ಥೆಯನ್ನು ದುರ್ಬಲ ಮಾಡುತ್ತಿರುವವರ ವಿರುದ್ಧ ಹೋರಾಟ ನಡೆಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕರ್ನಾಟಕ ಪಬ್ಲಿಕ್ ಶಾಲೆಗಳನ್ನು(ಕೆಪಿಎಸ್) ಪರಿಚಯಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳ ‘ಮುಚ್ಚುವಿಕೆ’ ಕ್ರಮದ ವಿರುದ್ಧ ಚಳವಳಿ ಸಂಘಟಿಸಬೇಕಿದೆ’ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ಕರೆ ನೀಡಿದರು.</p>.<p>ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ಬೆಂಗಳೂರು ಜಿಲ್ಲಾ ಮಂಡಳಿಯು ನಗರದಲ್ಲಿ ಶನಿವಾರ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಶಾಲೆಗಳನ್ನು ಮುಚ್ಚುವುದು ಎಂದರೆ ಸಂವಿಧಾನದ ಬಾಗಿಲುಗಳನ್ನು ಮುಚ್ಚಿದಂತೆ. ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪರಿಚಯಿಸುವ ಮೊದಲು ರಾಜ್ಯ ಸರ್ಕಾರವು ಪಾಲುದಾರರೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ’ ಎಂದು ಆರೋಪಿಸಿದರು.</p>.<p>‘ಕರ್ನಾಟಕ ಪಬ್ಲಿಕ್ ಶಾಲೆಗಳು, ಸಕಾರಾತ್ಮಕ ಬದಲಾವಣೆಗಳನ್ನು ತಂದಿವೆಯೇ ಎಂಬುದನ್ನು ನಿರ್ಣಯಿಸಲು ಸಮಗ್ರ ಅಧ್ಯಯನ ನಡೆದಿತ್ತೇ’ ಎಂದು ಪ್ರಶ್ನಿಸಿದರು.</p>.<p>‘ಸಚಿವ ಮಧು ಬಂಗಾರಪ್ಪ ಅವರು ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದರು. ಆದರೆ, ಏಳು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಆದೇಶವನ್ನು ಯಾವ ಕಾರಣಕ್ಕೆ ಹೊರಡಿಸಲಾಗಿದೆ’ ಎಂದು ಪ್ರಶ್ನಿಸಿದರು.</p>.<p>‘ಅನುದಾನ ಕಡಿಮೆ ಮಾಡುವುದು, ಸಾರ್ವಜನಿಕ ಸಂಸ್ಥೆಗಳನ್ನು ದುರ್ಬಲಗೊಳಿಸುವ ತಂತ್ರವನ್ನು ಸರ್ಕಾರ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>ಶಿಕ್ಷಣ ತಜ್ಞ ಶ್ರೀಪಾದ್ ಭಟ್ ಮಾತನಾಡಿ, ‘ಸರ್ಕಾರಿ ಶಾಲೆಗಳ ಮುಚ್ಚುವಿಕೆಯ ವಿರುದ್ಧ ಶಿಕ್ಷಣ ಸಚಿವರು ವಿದ್ಯಾರ್ಥಿ ಸಂಘಟನೆಗಳ ಜತೆಗೆ ಸಭೆ ನಡೆಸಬೇಕು. ಶಿಕ್ಷಣ ವ್ಯವಸ್ಥೆಯನ್ನು ದುರ್ಬಲ ಮಾಡುತ್ತಿರುವವರ ವಿರುದ್ಧ ಹೋರಾಟ ನಡೆಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>