<p><strong>ಬೆಂಗಳೂರು</strong>: ಗ್ರಾಹಕರಿಂದ ₹32.73 ಕೋಟಿ ಠೇವಣಿ ಸಂಗ್ರಹಿಸಿ ಬಡ್ಡಿಯನ್ನೂ ನೀಡದೆ, ಠೇವಣಿಯನ್ನೂ ಹಿಂತಿರುಗಿಸದೆ ವಂಚಿಸಿದ ಪ್ರಕರಣದಲ್ಲಿ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.</p>.<p>ಸಂಘದ ಅಧ್ಯಕ್ಷರಾಗಿದ್ದ ಬಿ.ವಿ. ಲಕ್ಷ್ಮೀನಾರಾಯಣ, ಅವರ ಪತ್ನಿ ರಾಧಿಕಾ ಮತ್ತು ಸಂಘದ ವ್ಯವಸ್ಥಾಪಕಿಯಾಗಿದ್ದ ಆಶಾ ರಾವ್ ವಿರುದ್ಧವೂ ಮಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಇ.ಡಿ ದೂರು ದಾಖಲಿಸಿದೆ.</p>.<p>ಠೇವಣಿದಾರರ ಹಣವನ್ನು ದುರ್ಬಳಕೆ ಮಾಡಿಕೊಂಡು ಲಕ್ಷ್ಮೀನಾರಾಯಣ ತಮ್ಮ ಮತ್ತು ತಮ್ಮ ಪತ್ನಿ ರಾಧಿಕಾ ಹೆಸರಿನಲ್ಲಿ ಹಲವು ಸ್ಥಿರಾಸ್ತಿಗಳನ್ನು ಖರೀದಿಸಿದ್ದಾರೆ. ಆಶಾ ರಾವ್ ಸಹ ಸ್ಥಿರಾಸ್ತಿಗಳನ್ನು ಖರೀದಿಸಿದ್ದು, ರಾಜ್ಯ ಸರ್ಕಾರದ ಸಂಸ್ಥೆಗಳು ಈಗಾಗಲೇ ಅವುಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಇ.ಡಿ ತಿಳಿಸಿದೆ.</p>.<p>ಈ ಅಕ್ರಮದಲ್ಲಿ ಇನ್ನಷ್ಟು ವ್ಯಕ್ತಿಗಳು ಭಾಗಿಯಾಗಿದ್ದು, ತನಿಖೆ ಮುಂದುವರೆದಿದೆ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗ್ರಾಹಕರಿಂದ ₹32.73 ಕೋಟಿ ಠೇವಣಿ ಸಂಗ್ರಹಿಸಿ ಬಡ್ಡಿಯನ್ನೂ ನೀಡದೆ, ಠೇವಣಿಯನ್ನೂ ಹಿಂತಿರುಗಿಸದೆ ವಂಚಿಸಿದ ಪ್ರಕರಣದಲ್ಲಿ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.</p>.<p>ಸಂಘದ ಅಧ್ಯಕ್ಷರಾಗಿದ್ದ ಬಿ.ವಿ. ಲಕ್ಷ್ಮೀನಾರಾಯಣ, ಅವರ ಪತ್ನಿ ರಾಧಿಕಾ ಮತ್ತು ಸಂಘದ ವ್ಯವಸ್ಥಾಪಕಿಯಾಗಿದ್ದ ಆಶಾ ರಾವ್ ವಿರುದ್ಧವೂ ಮಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಇ.ಡಿ ದೂರು ದಾಖಲಿಸಿದೆ.</p>.<p>ಠೇವಣಿದಾರರ ಹಣವನ್ನು ದುರ್ಬಳಕೆ ಮಾಡಿಕೊಂಡು ಲಕ್ಷ್ಮೀನಾರಾಯಣ ತಮ್ಮ ಮತ್ತು ತಮ್ಮ ಪತ್ನಿ ರಾಧಿಕಾ ಹೆಸರಿನಲ್ಲಿ ಹಲವು ಸ್ಥಿರಾಸ್ತಿಗಳನ್ನು ಖರೀದಿಸಿದ್ದಾರೆ. ಆಶಾ ರಾವ್ ಸಹ ಸ್ಥಿರಾಸ್ತಿಗಳನ್ನು ಖರೀದಿಸಿದ್ದು, ರಾಜ್ಯ ಸರ್ಕಾರದ ಸಂಸ್ಥೆಗಳು ಈಗಾಗಲೇ ಅವುಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಇ.ಡಿ ತಿಳಿಸಿದೆ.</p>.<p>ಈ ಅಕ್ರಮದಲ್ಲಿ ಇನ್ನಷ್ಟು ವ್ಯಕ್ತಿಗಳು ಭಾಗಿಯಾಗಿದ್ದು, ತನಿಖೆ ಮುಂದುವರೆದಿದೆ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>