ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಹೊರ ರಾಜ್ಯಗಳಿಂದ ಹುಡುಗಿಯರನ್ನು ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಿದ್ದ ಜಾಲವೊಂದನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಭೇದಿಸಿದ್ದಾರೆ.
ಮಾರತ್ತಹಳ್ಳಿಯ ಹೊರ ವರ್ತುಲ ರಸ್ತೆಯ ಬಳಿಯಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಸಂಗ್ರಹಿಸಿದ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಗುರುವಾರ ದಾಳಿ ನಡೆಸಿ ಹೊರರಾಜ್ಯದಿಂದ ಕರೆತಂದಿದ್ದ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ (31) ಹಾಗೂ ರಂಗಸ್ವಾಮಿ (51) ಎಂಬುವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಸ್ವಾತಿ ಅಲಿಯಾಸ್ ಸರಸ್ವತಿ ಎಂಬುವರು ಪರಾರಿಯಾಗಿದ್ದಾರೆ. ಗಿರಾಕಿ ನಾಜಿಮ್ವುದ್ದೀನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳಿಂದ ಮೂರು ಮೊಬೈಲ್ ಫೋನ್, ಸ್ವಲ್ಪ ಹಣ ಮತ್ತು ಕಾಂಡೋಮ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರು ತಮ್ಮ ಮೊಬೈಲ್ ಫೋನ್ಗಳ ಮುಖಾಂತರ ಹುಡುಗಿಯರ ಫೋಟೋ ಕಳುಹಿಸಿ ಗಿರಾಕಿಗಳನ್ನು ಸೆಳೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.