<p><strong>ಬೆಂಗಳೂರು:</strong>‘ನಗರದಲ್ಲಿ ಕೆಂಪೇಗೌಡರ ಕಾಲದಲ್ಲಿ ನಿರ್ಮಾಣವಾಗಿರುವ ಸ್ಮಾರಕಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು’ ಎಂದು ‘ಬೆಂಗಳೂರು ನಿರ್ಮಾಪಕ ಕೆಂಪೇಗೌಡ ಕೇಂದ್ರ ಸಮಿತಿ’ ಒತ್ತಾಯಿಸಿದೆ.</p>.<p>‘ಕೆಂಪೇಗೌಡರ ಮನೆದೇವರ ಹೆಸರಿನಲ್ಲಿ ನಿರ್ಮಿಸಿರುವ ಕೆಂಪಾಂಬುದಿ ಕೆರೆಯ ದಕ್ಷಿಣಕ್ಕೆ ಗವಿಪುರ ಗ್ರಾಮದ 4 ಎಕರೆ ಆಸ್ತಿ ಸರ್ಕಾರಕ್ಕೆ ಸೇರಿದೆ. ಈ ಸ್ಥಳದಲ್ಲಿ ಬೆಂಗಳೂರಿನ ನಾಲ್ಕು ಗಡಿಗೋಪುರಗಳ ಪೈಕಿ ಒಂದು ಗೋಪುರವಿದೆ. ಈ ಸ್ಥಳವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ’ ಎಂದು ಸಮಿತಿಯ ಮಾಜಿ ಉಪಾಧ್ಯಕ್ಷ ಸಿ. ಕಾಳಯ್ಯ ಹೇಳಿದ್ದಾರೆ.</p>.<p>‘ಕೆಂಪಾಂಬುದಿ ಕೆರೆಯ ನಿರ್ವಹಣೆಯೂ ಸಮರ್ಪಕವಾಗಿಲ್ಲ. ಕೆರೆಯ ದಕ್ಷಿಣಕ್ಕೆ ಬಂಡಿ ಮಹಾಕಾಳಿ ದೇವರ ಹೆಸರಿನಲ್ಲಿ ಟ್ರಸ್ಟ್ ನಿರ್ಮಾಣ ಮಾಡಿ, ಈ ಆಸ್ತಿ ನಮಗೆ ಸೇರಬೇಕು ಎಂದು ಫಲಕ ಹಾಕಲಾಗಿದೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಈ ಫಲಕ ತೆಗೆಸಿ, ಸರ್ಕಾರದ ಜಾಗ ರಕ್ಷಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ನಗರದಲ್ಲಿ ಕೆಂಪೇಗೌಡರ ಕಾಲದಲ್ಲಿ ನಿರ್ಮಾಣವಾಗಿರುವ ಸ್ಮಾರಕಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು’ ಎಂದು ‘ಬೆಂಗಳೂರು ನಿರ್ಮಾಪಕ ಕೆಂಪೇಗೌಡ ಕೇಂದ್ರ ಸಮಿತಿ’ ಒತ್ತಾಯಿಸಿದೆ.</p>.<p>‘ಕೆಂಪೇಗೌಡರ ಮನೆದೇವರ ಹೆಸರಿನಲ್ಲಿ ನಿರ್ಮಿಸಿರುವ ಕೆಂಪಾಂಬುದಿ ಕೆರೆಯ ದಕ್ಷಿಣಕ್ಕೆ ಗವಿಪುರ ಗ್ರಾಮದ 4 ಎಕರೆ ಆಸ್ತಿ ಸರ್ಕಾರಕ್ಕೆ ಸೇರಿದೆ. ಈ ಸ್ಥಳದಲ್ಲಿ ಬೆಂಗಳೂರಿನ ನಾಲ್ಕು ಗಡಿಗೋಪುರಗಳ ಪೈಕಿ ಒಂದು ಗೋಪುರವಿದೆ. ಈ ಸ್ಥಳವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ’ ಎಂದು ಸಮಿತಿಯ ಮಾಜಿ ಉಪಾಧ್ಯಕ್ಷ ಸಿ. ಕಾಳಯ್ಯ ಹೇಳಿದ್ದಾರೆ.</p>.<p>‘ಕೆಂಪಾಂಬುದಿ ಕೆರೆಯ ನಿರ್ವಹಣೆಯೂ ಸಮರ್ಪಕವಾಗಿಲ್ಲ. ಕೆರೆಯ ದಕ್ಷಿಣಕ್ಕೆ ಬಂಡಿ ಮಹಾಕಾಳಿ ದೇವರ ಹೆಸರಿನಲ್ಲಿ ಟ್ರಸ್ಟ್ ನಿರ್ಮಾಣ ಮಾಡಿ, ಈ ಆಸ್ತಿ ನಮಗೆ ಸೇರಬೇಕು ಎಂದು ಫಲಕ ಹಾಕಲಾಗಿದೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಈ ಫಲಕ ತೆಗೆಸಿ, ಸರ್ಕಾರದ ಜಾಗ ರಕ್ಷಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>