<p><strong>ಬೆಂಗಳೂರು:</strong> ಎಲೆಕ್ಟ್ರಾನಿಕ್ ಸಿಟಿ ಬಳಿ ಕಟ್ಟಡವೊಂದರ 17ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ಯುವತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.</p>.<p>ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಶುಭ ಎಂಬ ಯುವತಿಯೇ ಆತ್ಮಹತ್ಯೆಗೆ ಯತ್ನಿಸಿದವಳು.</p>.<p>ದೆಹಲಿಯ ಶುಭ ಮಾನಸಿಕವಾಗಿ ನೊಂದಿದ್ದಳು. ಎಲೆಕ್ಟ್ರಾನಿಕ್ ಸಿಟಿಯ ಪ್ರೆಸ್ಟೀಜ್ ಸನ್ರೈಸ್ ಅಪಾರ್ಟೆಂಟ್ನ ತನ್ನ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ. ಲಾಕ್ ಡೌನ್ ಇದ್ದದ್ದರಿಂದ ದೆಹಲಿಗೆ ವಾಪಸು ಹೋಗಲು ಆಗಿರಲಿಲ್ಲ.</p>.<p>ಕೆಲ ವರ್ಷಗಳ ಹಿಂದೆ ತನ್ನ ತಾಯಿಯನ್ನು ಕಳೆದುಕೊಂಡಿದ್ದ ಯುವತಿ. ತನ್ನ ಸಂಬಂಧಿ ಮನೆಯಲ್ಲಿ ತನ್ನ ತಾಯಿಯ ವರ್ಷದ ಕಾರ್ಯ ನಡೆದಿತ್ತು. ಹೀಗಾಗಿ ಅದರಿಂದ ಇನ್ನಷ್ಟು ನೊಂದಿದ್ದ ಯುವತಿ..</p>.<p>ಅಪಾರ್ಟ್ಮೆಂಟ್ ನ 17ನೇ ಮಹಡಿಗೆ ಏರಿ ಕುಳಿತಿದ್ದ ಯುವತಿ, ಅಲ್ಲಿಂದ ಬೀಳಲು ಯತ್ನಿಸುತ್ತಿದ್ದಳು. ಅದನ್ನು ಗಮನಿಸಿದ ಅಪಾರ್ಟ್ಮೆಂಟ್ನ ವ್ಯಕ್ತಿಯೊಬ್ಬ, ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಸಿಬ್ಬಂದಿ, ಯುವತಿಯ ಮನವೊಲಿಸಿ ರಕ್ಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಲೆಕ್ಟ್ರಾನಿಕ್ ಸಿಟಿ ಬಳಿ ಕಟ್ಟಡವೊಂದರ 17ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ಯುವತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.</p>.<p>ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಶುಭ ಎಂಬ ಯುವತಿಯೇ ಆತ್ಮಹತ್ಯೆಗೆ ಯತ್ನಿಸಿದವಳು.</p>.<p>ದೆಹಲಿಯ ಶುಭ ಮಾನಸಿಕವಾಗಿ ನೊಂದಿದ್ದಳು. ಎಲೆಕ್ಟ್ರಾನಿಕ್ ಸಿಟಿಯ ಪ್ರೆಸ್ಟೀಜ್ ಸನ್ರೈಸ್ ಅಪಾರ್ಟೆಂಟ್ನ ತನ್ನ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ. ಲಾಕ್ ಡೌನ್ ಇದ್ದದ್ದರಿಂದ ದೆಹಲಿಗೆ ವಾಪಸು ಹೋಗಲು ಆಗಿರಲಿಲ್ಲ.</p>.<p>ಕೆಲ ವರ್ಷಗಳ ಹಿಂದೆ ತನ್ನ ತಾಯಿಯನ್ನು ಕಳೆದುಕೊಂಡಿದ್ದ ಯುವತಿ. ತನ್ನ ಸಂಬಂಧಿ ಮನೆಯಲ್ಲಿ ತನ್ನ ತಾಯಿಯ ವರ್ಷದ ಕಾರ್ಯ ನಡೆದಿತ್ತು. ಹೀಗಾಗಿ ಅದರಿಂದ ಇನ್ನಷ್ಟು ನೊಂದಿದ್ದ ಯುವತಿ..</p>.<p>ಅಪಾರ್ಟ್ಮೆಂಟ್ ನ 17ನೇ ಮಹಡಿಗೆ ಏರಿ ಕುಳಿತಿದ್ದ ಯುವತಿ, ಅಲ್ಲಿಂದ ಬೀಳಲು ಯತ್ನಿಸುತ್ತಿದ್ದಳು. ಅದನ್ನು ಗಮನಿಸಿದ ಅಪಾರ್ಟ್ಮೆಂಟ್ನ ವ್ಯಕ್ತಿಯೊಬ್ಬ, ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಸಿಬ್ಬಂದಿ, ಯುವತಿಯ ಮನವೊಲಿಸಿ ರಕ್ಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>