‘ರಾಜ್ಯ ಸರ್ಕಾರ ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಂಡ ರೀತಿಯಲ್ಲಿ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್, ಡಾಟಾ ಆಪರೇಟರ್ಸ್ ಮತ್ತು ಸ್ಯಾನಿಟರಿ ಸೂಪರ್ ವೈಸರ್ಸ್ ಸೇರಿ 15 ಸಾವಿರಕ್ಕೂ ಹೆಚ್ಚು ನೌಕರರು ಹೊರಗುತ್ತಿಗೆಯಲ್ಲಿ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರನ್ನು ಕೂಡಲೇ ನೇರ ಪಾವತಿಗೊಳಪಡಿಸಿ ಹಂತ ಹಂತವಾಗಿ ಖಾಯಂಗೊಳಿಸಬೇಕು’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ. ನಾಗಣ್ಣಗೌಡ ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.